Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:4 - ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಅನೇಕ ಜನರು ಕೂಡಿಕೊಂಡು, “ನೀರು ಬುಗ್ಗೆಗಳನ್ನೂ, ದೇಶದ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟು, ಅಸ್ಸೀರಿಯದ ಅರಸರು ಬಂದು ಬಹಳ ನೀರು ದೊರಕಿಸಿಕೊಳ್ಳುವುದು ಏಕೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಸ್ಸೀರಿಯದ ರಾಜನಿಗೆ ಬೇಕಾದಷ್ಟು ನೀರು ಏಕೆ ಸಿಕ್ಕಬೇಕು?,” ಎಂದುಕೊಂಡು ಎಲ್ಲಾ ಬಾವಿಗಳನ್ನೂ ನಾಡಿನ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಅನೇಕರು ಸೇರಿ - ಇಲ್ಲಿಗೆ ಬರುವ ಅಶ್ಶೂರದ ರಾಜರಿಗೆ ಬೇಕಾದಷ್ಟು ನೀರು ಯಾಕೆ ಸಿಕ್ಕಬೇಕು ಎಂದುಕೊಂಡು ಎಲ್ಲಾ ಬಾವಿಗಳನ್ನೂ ದೇಶಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅನೇಕ ಜನರು ಒಟ್ಟಾಗಿ ಬಂದು ದೇಶದ ಮಧ್ಯದಲ್ಲಿ ಹರಿಯುವ ಹಳ್ಳಗಳನ್ನೂ ತೊರೆಗಳನ್ನೂ ಬುಗ್ಗೆಗಳನ್ನೂ ನಿಲ್ಲಿಸಿದರು. ಅಶ್ಶೂರದ ಅರಸನು ಬಂದಾಗ ಅವನಿಗೆ ನೀರು ಸಿಗದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:4
15 ತಿಳಿವುಗಳ ಹೋಲಿಕೆ  

ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು, ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿದನು.


ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?


ಹಿಜ್ಕೀಯನು ಇಷ್ಟು ನಂಬಿಗಸ್ತಿಕೆಯಿಂದ ಎಲ್ಲವನ್ನೂ ಮಾಡಿದ ತರುವಾಯ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿಸಿ, ಅವುಗಳನ್ನು ತನಗಾಗಿ ಜಯಿಸಬೇಕೆಂದು ಮುತ್ತಿಗೆಹಾಕಿದನು.


ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.


ಹಿಜ್ಕೀಯನ ಇತರ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ ಅವನು ಕೆರೆ ಮತ್ತು ಕಾಲುವೆಗಳನ್ನು ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರಮಾಡಿದ್ದೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


“ಯೆಹೋವ ದೇವರೇ, ಅಸ್ಸೀರಿಯದ ಅರಸರು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.


ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ಇಸ್ರಾಯೇಲಿನ ಅರಸನಾದ ಏಲನ ಮಗ ಹೋಶೇಯನ ಆಳ್ವಿಕೆಯ ಏಳನೆಯ ವರ್ಷ, ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆಹಾಕಿದನು.


ಆಗ ಎಲೀಷನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ, ನೊಗದ ಕಟ್ಟಿಗೆಯಿಂದ ಅವುಗಳ ಮಾಂಸವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.


ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.


ಅವನು ಪಟ್ಟಣದ ಹೊರಗಿರುವ ನೀರಿನ ಬುಗ್ಗೆಗಳನ್ನು ಮುಚ್ಚಿಸುವುದಕ್ಕೆ ತನ್ನ ಪ್ರಧಾನರ ಮತ್ತು ತನ್ನ ಪರಾಕ್ರಮಶಾಲಿಗಳ ಸಂಗಡ ಯೋಚಿಸಿಕೊಂಡನು. ಅವರು ಅವನಿಗೆ ಸಹಾಯ ಕೊಟ್ಟರು.


ಎರಡು ಗೋಡೆಗಳ ನಡುವೆ ಹಳೆಯ ಕೆರೆಯ ನೀರಿಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಕಾಲುವೆ ಮಾಡುತ್ತೀರಿ. ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸುವುದಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದವರನ್ನು ನೀನು ಲಕ್ಷಿಸುವುದಿಲ್ಲ.


ಮುತ್ತಿಗೆಗೋಸ್ಕರ ನೀರನ್ನು ಸೇದು; ನಿನ್ನ ಬಲವಾದ ಕೋಟೆಗಳನ್ನು ಭದ್ರಮಾಡು; ಕೆಸರಿನಲ್ಲಿ ಸೇರು; ಮಣ್ಣನ್ನು ತುಳಿ; ಇಟ್ಟಿಗೆ ಅಚ್ಚನ್ನು ಹಿಡಿ.


ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ. ಕೆಳಗಿನ ಕೊಳಕ್ಕೆ ನೀರನ್ನು ತುಂಬಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು