Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:7 - ಕನ್ನಡ ಸಮಕಾಲಿಕ ಅನುವಾದ

7 “ಬಲಗೊಳ್ಳಿರಿ, ಧೈರ್ಯವಾಗಿರಿ, ಅಸ್ಸೀರಿಯದ ಅರಸನ ನಿಮಿತ್ತವೂ, ಅವನ ಸಂಗಡ ಕೂಡಿರುವ ಮಹಾ ಗುಂಪಿನ ನಿಮಿತ್ತವೂ ಭಯಪಡಬೇಡಿರಿ, ನಿರಾಶರಾಗಬೇಡಿರಿ. ಏಕೆಂದರೆ ಅವನ ಸಂಗಡ ಇರುವವರಿಗಿಂತ ಮಿಗಿಲಾದದ್ದು ನಮ್ಮ ಸಂಗಡ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಸ್ಸೀರಿಯದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಸೈನ್ಯಕ್ಕೂ ಅಂಜಬೇಡಿ, ಕಳವಳಪಡಬೇಡಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯ ದೊಡ್ಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:7
27 ತಿಳಿವುಗಳ ಹೋಲಿಕೆ  

ಆದರೆ ಪ್ರವಾದಿಯು, “ಭಯಪಡಬೇಡ. ಅವರ ಸಂಗಡ ಇರುವವರಿಗಿಂತ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದನು.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.


ಆಗ ಯಹಜೀಯೇಲನು, “ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ.


ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರು, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ, ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ದೇವಾಲಯವನ್ನು ಕಟ್ಟುವ ಹಾಗೆ ಸೇನಾಧೀಶ್ವರ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾದ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.


ಭಯಭ್ರಾಂತ ಹೃದಯವುಳ್ಳವರಿಗೆ ಬಲಗೊಳ್ಳಿರಿ, ಹೆದರಬೇಡಿರಿ. ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ, ದೇವರು ಪ್ರತಿಫಲವನ್ನು ಕೊಡುವುದಕ್ಕೂ ತಾವೇ ಬಂದು ನಿಮ್ಮನ್ನು ರಕ್ಷಿಸುವರು, ಎಂದು ಅವರಿಗೆ ಹೇಳಿರಿ.


ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.


“ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.


ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.


ಆದ್ದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲಗೊಂಡವನಾಗಿರು.


ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು.


ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.


ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ.


ಅದೇ ಕಾಲದಲ್ಲಿ ದರ್ಶಿಯಾದ ಹನಾನೀಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವ ದೇವರ ಮೇಲೆ ಆತುಕೊಳ್ಳದೆ, ಅರಾಮಿನ ಅರಸನ ಮೇಲೆ ಆತುಕೊಂಡದ್ದರಿಂದ, ಅರಾಮಿನ ಅರಸನ ಸೈನ್ಯವು ನಿಮ್ಮ ಕೈಯಿಂದ ತಪ್ಪಿಸಿಕೊಂಡಿತು.


ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು.


ನೀವು ಭಯಪಡುವ ಬಾಬಿಲೋನಿನ ಅರಸನಿಗೆ ಭಯಪಡಬೇಡಿರಿ; ಅವನಿಗೆ ಭಯಪಡಬೇಡಿರೆಂದು ಯೆಹೋವ ದೇವರು ಹೇಳುತ್ತಾರೆ; ಏಕೆಂದರೆ ನಿಮ್ಮನ್ನು ರಕ್ಷಿಸುವುದಕ್ಕೂ, ಅವನ ಕೈಯಿಂದ ನಿಮ್ಮನ್ನು ತಪ್ಪಿಸುವುದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಹಿಜ್ಕೀಯನು ಇಸ್ರಾಯೇಲಿನ ಯೆಹೋವ ದೇವರಲ್ಲಿ ಭರವಸೆವುಳ್ಳವನಾಗಿದ್ದನು. ಅವನಿಗೆ ಮುಂಚೆ ಇದ್ದವರಲ್ಲಿಯೂ, ಅವನ ತರುವಾಯ ಯೆಹೂದದ ಸಮಸ್ತ ಅರಸುಗಳಲ್ಲಿಯೂ ಅವನ ಹಾಗೆ ಒಬ್ಬರೂ ಇರಲಿಲ್ಲ.


ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು,” ಎಂದನು.


ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.


ಅವರು ಯೆರೂಸಲೇಮಿಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೂ, ಅಭ್ಯಂತರಿಸುವುದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು