Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:8 - ಕನ್ನಡ ಸಮಕಾಲಿಕ ಅನುವಾದ

8 ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನಿಗಿರುವ ಸಹಾಯವು ಮಾಂಸದ ತೋಳು; ನಮಗಾದರೋ ನಮ್ಮ ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸವುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಶ್ಶೂರದ ರಾಜನ ಬಳಿಯಲ್ಲಿ ಮನುಷ್ಯರು ಮಾತ್ರ ಇರುವರು. ಆದರೆ ನಮ್ಮೊಂದಿಗೆ ದೇವರಾದ ಯೆಹೋವನಿದ್ದಾನೆ. ನಮ್ಮ ದೇವರು ನಮಗೆ ಸಹಾಯ ಮಾಡುತ್ತಾನೆ. ನಮ್ಮ ಯುದ್ಧದಲ್ಲಿ ಆತನು ನಮಗೋಸ್ಕರ ಕಾದಾಡುವನು” ಎಂದು ಹೇಳಿ ಹಿಜ್ಕೀಯ ಅರಸನು ತನ್ನ ಜನರನ್ನು ಪ್ರೋತ್ಸಾಹಿಸಿ ಬಲಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:8
35 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.


ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.


ಆಗ ಯಹಜೀಯೇಲನು, “ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ನಾನೇ ನಿನ್ನೊಂದಿಗಿದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ನಿನಗೆ ಕೇಡನ್ನುಂಟುಮಾಡುವುದಿಲ್ಲ. ಏಕೆಂದರೆ ನನಗಾಗಿ ಈ ಪಟ್ಟಣದಲ್ಲಿ ಅನೇಕ ಜನರಿದ್ದಾರೆ,” ಎಂದರು.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ,” ಎಂದು ಹೇಳಬೇಕು.


ಆತಂಕವು ಹೃದಯವನ್ನು ಕುಗ್ಗಿಸುವುದು, ಆದರೆ ಕನಿಕರದ ಮಾತು ಹುರಿದುಂಬಿಸುವುದು.


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.


ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ.


“ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆಯಾಗಿರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ?


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?


ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.


ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.


ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ದಾವೀದನು ಫಿಲಿಷ್ಟಿಯನಿಗೆ, “ನೀನು ಖಡ್ಗ, ಈಟಿ ಮತ್ತು ಗುರಾಣಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ. ಆದರೆ ನಾನು, ನೀನು ನಿಂದಿಸಿದ ಇಸ್ರಾಯೇಲಿನ ಸೈನ್ಯಗಳ ದೇವರಾದ ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ನಿನ್ನ ಬಳಿಗೆ ಬರುತ್ತೇನೆ.


ಆದರೆ ಪ್ರವಾದಿಯು, “ಭಯಪಡಬೇಡ. ಅವರ ಸಂಗಡ ಇರುವವರಿಗಿಂತ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದನು.


ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.


ಅದೇ ಕಾಲದಲ್ಲಿ ದರ್ಶಿಯಾದ ಹನಾನೀಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವ ದೇವರ ಮೇಲೆ ಆತುಕೊಳ್ಳದೆ, ಅರಾಮಿನ ಅರಸನ ಮೇಲೆ ಆತುಕೊಂಡದ್ದರಿಂದ, ಅರಾಮಿನ ಅರಸನ ಸೈನ್ಯವು ನಿಮ್ಮ ಕೈಯಿಂದ ತಪ್ಪಿಸಿಕೊಂಡಿತು.


ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ; ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ.


ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು.


ನೀವು ಭಯಪಡುವ ಬಾಬಿಲೋನಿನ ಅರಸನಿಗೆ ಭಯಪಡಬೇಡಿರಿ; ಅವನಿಗೆ ಭಯಪಡಬೇಡಿರೆಂದು ಯೆಹೋವ ದೇವರು ಹೇಳುತ್ತಾರೆ; ಏಕೆಂದರೆ ನಿಮ್ಮನ್ನು ರಕ್ಷಿಸುವುದಕ್ಕೂ, ಅವನ ಕೈಯಿಂದ ನಿಮ್ಮನ್ನು ತಪ್ಪಿಸುವುದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


“ಇಸ್ರಾಯೇಲರೇ ಕೇಳಿರಿ, ನೀವು ಈ ಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸಮೀಪ ಬಂದಿದ್ದೀರಿ. ನಿಮ್ಮ ಹೃದಯಗಳು ಕುಗ್ಗಬಾರದು. ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂ ಬೇಡಿರಿ.


ಹಿಜ್ಕೀಯನು ಇಸ್ರಾಯೇಲಿನ ಯೆಹೋವ ದೇವರಲ್ಲಿ ಭರವಸೆವುಳ್ಳವನಾಗಿದ್ದನು. ಅವನಿಗೆ ಮುಂಚೆ ಇದ್ದವರಲ್ಲಿಯೂ, ಅವನ ತರುವಾಯ ಯೆಹೂದದ ಸಮಸ್ತ ಅರಸುಗಳಲ್ಲಿಯೂ ಅವನ ಹಾಗೆ ಒಬ್ಬರೂ ಇರಲಿಲ್ಲ.


ಆಸನು ಅವನಿಗೆದುರಾಗಿ ಹೊರಟುಹೋದನು. ಮಾರೇಷಾದ ಬಳಿಯಲ್ಲಿ ಚೆಫಾತಾದ ತಗ್ಗಿನಲ್ಲಿ ವ್ಯೂಹ ಕಟ್ಟಿದರು.


ಯೆಹೋವ ದೇವರು ಅದರ ಮೇಲೆ ತರುವಂಥ ನೇಮಿಸಿದ ದಂಡವು ಹಾದು ಹೋಗುವಲ್ಲೆಲ್ಲಾ ಅದು ದಮ್ಮಡಿ, ಕಿನ್ನರಿಗಳ ಸಂಗಡ ಇರುವುದು. ಆತನು ಅವರೊಂದಿಗೆ ಯುದ್ಧಗಳಲ್ಲಿ ಹೋರಾಡುತ್ತಾ ಕೈಬೀಸಿ ಯುದ್ಧಮಾಡುವನು.


ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು