Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:16 - ಕನ್ನಡ ಸಮಕಾಲಿಕ ಅನುವಾದ

16 ಅವನು ಯೆಹೋವ ದೇವರ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ಸಮಾಧಾನದ ಬಲಿಗಳನ್ನೂ, ಸ್ತೋತ್ರದ ಬಲಿಗಳನ್ನೂ ಅರ್ಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರನ ಬಲಿಪೀಠವನ್ನು ಪುನಃ ಕಟ್ಟಿಸಿ, ಅದರ ಮೇಲೆ ಶಾಂತಿಸಮಾಧಾನ ಬಲಿಗಳನ್ನೂ ಕೃತಜ್ಞತಾ ಬಲಿಗಳನ್ನೂ ಅರ್ಪಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನನ್ನೇ ಅವಲಂಬಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನ ಯಜ್ಞವೇದಿಯನ್ನು ತಿರಿಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಅರ್ಪಿಸಿ ಇಸ್ರಾಯೇಲ್‍ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನ ಯಜ್ಞವೇದಿಕೆಯನ್ನು ಕಟ್ಟಿಸಿ ಅದರಲ್ಲಿ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದನು. ಯೆಹೂದದಲ್ಲಿದ್ದ ಎಲ್ಲಾ ಜನರೂ ದೇವರಾದ ಯೆಹೋವನ ಸೇವೆಮಾಡುವಂತೆ ಆಜ್ಞೆ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:16
11 ತಿಳಿವುಗಳ ಹೋಲಿಕೆ  

ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.


ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರ ಆಲಯವನ್ನೆಲ್ಲಾ, ದಹನಬಲಿಪೀಠವನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು, ಅದರ ಎಲ್ಲಾ ಪಾತ್ರೆಗಳನ್ನೂ ಶುದ್ಧಿಮಾಡಿದೆವು.


ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹುಡುಕಲೂ, ನಿಯಮವನ್ನೂ, ಆಜ್ಞೆಯನ್ನೂ ಕೈಗೊಳ್ಳಲು ಯೆಹೂದ್ಯರಿಗೆ ಆಜ್ಞಾಪಿಸಿದನು.


ಆಗ ಎಲೀಯನು ಸಮಸ್ತ ಜನರಿಗೂ, “ನನ್ನ ಬಳಿಗೆ ಬನ್ನಿರಿ,” ಎಂದನು. ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತು ಹಾಕಿದ ಯೆಹೋವ ದೇವರ ಬಲಿಪೀಠವನ್ನು ಅವನು ದುರಸ್ತಿ ಮಾಡಿದನು.


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ಹಿಜ್ಕೀಯನು ಅವರಿಗೆ ಉತ್ತರಕೊಟ್ಟು, “ಈಗ ನೀವು ನಿಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದರಿಂದ, ಸಮೀಪಕ್ಕೆ ಬಂದು ಬಲಿಗಳನ್ನೂ, ಸ್ತೋತ್ರ ಅರ್ಪಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬನ್ನಿರಿ,” ಎಂದನು. ಆಗ ಸಭೆಯವರು ಬಲಿಗಳನ್ನೂ, ಸ್ತೋತ್ರದ ಅರ್ಪಣೆಗಳನ್ನೂ ಮತ್ತು ಇಷ್ಟಪೂರ್ವಕ ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.


ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು