Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:20 - ಕನ್ನಡ ಸಮಕಾಲಿಕ ಅನುವಾದ

20 ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ಅವನ ಅರಮನೆಯಲ್ಲಿ ಹೂಳಿಟ್ಟರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮನಸ್ಸೆ ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮನಸ್ಸೆಯು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮನಸ್ಸೆಯು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ಅವನ ಸ್ವಂತ ಅರಮನೆಯಲ್ಲಿ ಸಮಾಧಿಮಾಡಿದರು. ಮನಸ್ಸೆಯ ಮಗನಾದ ಅಮೋನನು ಅವನ ಬದಲಿಗೆ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:20
9 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಮನಸ್ಸೆಯ ತಂದೆ, ಮನಸ್ಸೆಯು ಆಮೋನನ ತಂದೆ, ಆಮೋನನು ಯೋಷೀಯನ ತಂದೆ,


ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.


ಇವನ ಮಗನು ಆಮೋನನು; ಇವನ ಮಗನು ಯೋಷೀಯನು.


ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.


ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷದವನಾಗಿದ್ದನು, ಅವನು ಯೆರೂಸಲೇಮಿನಲ್ಲಿ ಎರಡು ವರ್ಷ ಆಳಿದನು.


ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವ ದೇವರು ದಯಪಾಲಿಸಿದ ವಾಕ್ಯ:


ಯೆಹೋರಾಮ್ ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಗಳಲ್ಲಿ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು