Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:6 - ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:6
24 ತಿಳಿವುಗಳ ಹೋಲಿಕೆ  

ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.


ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


“ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


“ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ ‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “ ‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು.


“ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.


ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?


ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,


ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದುಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವುದಕ್ಕೆ ಬಂದರು. ಅವರು ನನ್ನ ಆಲಯದ ಒಳಗೆ ಹೀಗೆ ಮಾಡಿದ್ದಾರೆ.


ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಇದೆ: ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ. ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.


ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.


ಇದಲ್ಲದೆ ಯಾಜಕನಾದ ಹಿಲ್ಕೀಯನು ಯೆಹೋವ ದೇವರ ಆಲಯದಲ್ಲಿ ಕಂಡುಕೊಂಡ ಗ್ರಂಥದಲ್ಲಿ ಬರೆದಿದ್ದ ನಿಯಮದ ಮಾತುಗಳನ್ನು ಯೋಷೀಯನು ಈಡೇರಿಸುವಂತೆ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನಲ್ಲಿಯೂ ಭೂತಪ್ರೇತಗಳನ್ನು ವಿಚಾರಿಸುವವರನ್ನೂ, ಮಂತ್ರಗಾರರನ್ನೂ, ಮನೆದೇವರುಗಳನ್ನೂ, ವಿಗ್ರಹಗಳನ್ನೂ, ಸಮಸ್ತ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿಬಿಟ್ಟನು.


ಯಾವನೂ ತನ್ನ ಮಗನನ್ನಾದರೂ, ಮಗಳನ್ನಾದರೂ ಮೋಲೆಕನಿಗೋಸ್ಕರ ಬೆಂಕಿಯಲ್ಲಿ ಬಲಿ ಅರ್ಪಿಸದಂತೆ ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತನ್ನು ಅಶುದ್ಧ ಮಾಡಿದನು.


ಕಣಿಗಳನ್ನೂ, ಶಕುನಗಳನ್ನೂ ಬಳಸಿ, ಯೆಹೋವ ದೇವರಿಗೆ ಕೋಪ ಬರುವಂತೆ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.


ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”


ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.


“ ‘ಪುರುಷನಾಗಲಿ, ಸ್ತ್ರೀಯಾಗಲಿ ಮಾಟಗಾರರಾಗಿದ್ದರೆ ಇಲ್ಲವೆ ಭೂತಪ್ರೇತಗಳನ್ನು ವಿಚಾರಿಸುವವರಾಗಿದ್ದರೆ, ಅವರನ್ನು ನಿಶ್ಚಯವಾಗಿ ಕೊಲ್ಲಬೇಕು. ಅವರ ಪಾಪವು ಅವರ ಮೇಲೆ ಇರುವುದು.’ ”


“ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು: ‘ಇಸ್ರಾಯೇಲರಲ್ಲಿಯಾಗಲಿ, ಇಸ್ರಾಯೇಲಿನಲ್ಲಿ ಪ್ರವಾಸಿಯಾದ ಪರಕೀಯರಲ್ಲಿಯಾಗಲಿ ಯಾವನಾದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ, ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು. ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿ ಕೊಡುವುದಕ್ಕಾಗಿ ಬೆನ್ ಹಿನ್ನೋಮ್ ತಗ್ಗಿನಲ್ಲಿ ಬಾಳ್ ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೇ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆ ಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.


ಅಹಾಬನು ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆಯೇ ಅಹಾಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಉಕ್ಕುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕವಾಗಿ ಕೆಟ್ಟತನ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು