Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:9 - ಕನ್ನಡ ಸಮಕಾಲಿಕ ಅನುವಾದ

9 ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಯೆಹೂದ್ಯರೂ ಯೆರೂಸಲೇವಿುನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲ್ಯರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:9
18 ತಿಳಿವುಗಳ ಹೋಲಿಕೆ  

ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.


ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.


ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.


ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಪಾಪಮಾಡಲು ಇಸ್ರಾಯೇಲನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ, ಅವನ ಮಾರ್ಗದಲ್ಲಿಯೂ ನಡೆದನು.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


“ ‘ನಾನು ಈಜಿಪ್ಟಿನಲ್ಲಿ ಮಾಡಿದ್ದನ್ನು ನಿಮ್ಮ ಕಣ್ಣುಗಳು ಕಂಡವು. ಮರುಭೂಮಿಯಲ್ಲಿ ಬಹುಕಾಲದವರೆಗೆ ವಾಸವಾಗಿದ್ದೀರಿ. ಅನಂತರ ಯೊರ್ದನ್ ನದಿ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ, ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.


ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು. ಆದರೆ ಯೆಹೋವ ದೇವರು ಅವರನ್ನು ಅಮ್ಮೋನಿಯರ ಮುಂದೆ ತೆಗೆದುಹಾಕಿದ್ದರು. ಹೀಗೆ ಅಮ್ಮೋನಿಯರು ಅವರನ್ನು ಹೊರಡಿಸಿ, ಅವರ ಬದಲಾಗಿ ವಾಸಿಸಿದರು.


“ ‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ.


ನಾನು ಮೋಶೆಯ ಮುಖಾಂತರ ಆಜ್ಞಾಪಿಸಿದ ಎಲ್ಲಾ ಅಪ್ಪಣೆಗಳನ್ನೂ, ಕಾನೂನುಗಳನ್ನೂ, ವಿಧಿಗಳನ್ನೂ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ನೇಮಕ ಮಾಡಿದ ದೇಶವನ್ನು ಪುನಃ ಇಸ್ರಾಯೇಲರು ಬಿಟ್ಟುಹೋಗುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.


ಯೆಹೋವ ದೇವರು ಮನಸ್ಸೆಯೊಂದಿಗೂ, ಅವನ ಜನರೊಂದಿಗೂ ಮಾತನಾಡಿದರು. ಆದರೆ ಅವರು ಲಕ್ಷಿಸಲಿಲ್ಲ.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದುದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ, ನನ್ನ ನ್ಯಾಯಗಳನ್ನು ಪಾಲಿಸದೇ ಇದ್ದುದರಿಂದಲೂ, ನಿಮ್ಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ,


ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು