Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:27 - ಕನ್ನಡ ಸಮಕಾಲಿಕ ಅನುವಾದ

27 ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರುಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:27
24 ತಿಳಿವುಗಳ ಹೋಲಿಕೆ  

ಅನಂತರ ಹಿಜ್ಕೀಯನೂ, ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯದಲ್ಲಿ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ, ಹಿಜ್ಕೀಯನ ದಿವಸಗಳಲ್ಲಿ ಯೆಹೋವ ದೇವರ ರೌದ್ರವು ಅವರ ಮೇಲೆ ಬರಲಿಲ್ಲ.


“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.


ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ; ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.


ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು. ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು.


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಓ ದೇವರೇ, ನಿಮಗೆ ಇಷ್ಟವಾದ ಯಜ್ಞಗಳು ಮುರಿದ ಆತ್ಮವೇ. ಮುರಿದಂಥ, ಜಜ್ಜಿದಂಥ ಹೃದಯವನ್ನು ದೇವರು ತಿರಸ್ಕರಿಸುವುದಿಲ್ಲ.


ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.


ಅರಸನು ದೇವರ ನಿಯಮದ ವಾಕ್ಯಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು.


ಅವರು ತಮ್ಮನ್ನು ತಗ್ಗಿಸಿಕೊಂಡದ್ದನ್ನು ಯೆಹೋವ ದೇವರು ನೋಡಿದಾಗ, ಯೆಹೋವ ದೇವರ ವಾಕ್ಯವು ಶೆಮಾಯನಿಗೆ ಉಂಟಾಗಿ, “ಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಮಾಡದೆ, ಅವರು ತಪ್ಪಿಸಿಕೊಳ್ಳುವಂತೆ ಮಾಡುವೆನು. ಶೀಶಕನ ಮುಖಾಂತರ ನನ್ನ ಕೋಪವನ್ನು ಯೆರೂಸಲೇಮಿನ ಮೇಲೆ ಸುರಿದುಬಿಡುವುದಿಲ್ಲ.


ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.


ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.


ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು.


ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,


ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.


ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.


ಯೆಹೋವ ದೇವರು ನಾನು ಕರುಣೆಗಾಗಿ ಕೇಳಿದ ನನ್ನ ಮೊರೆಯನ್ನು ಆಲಿಸಿದ್ದಾರೆ; ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಸ್ವೀಕರಿಸುವರು.


ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು