Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:30 - ಕನ್ನಡ ಸಮಕಾಲಿಕ ಅನುವಾದ

30 ಆಗ ಅರಸನೂ ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಯಾಜಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರ ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಜೆರುಸಲೇಮಿನವರನ್ನು, ಬೇರೆ ಎಲ್ಲ ಯೆಹೂದ್ಯರನ್ನು, ಯಾಜಕರನ್ನು ಹಾಗು ಲೇವಿಯರನ್ನು ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ದೊಡ್ಡವರೂ ಚಿಕ್ಕವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಲೇವಿಯರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅರಸನೂ ಯೆಹೂದದಲ್ಲಿ ವಾಸಿಸುವ ಜನರೂ ಜೆರುಸಲೇಮಿನಲ್ಲಿ ವಾಸಿಸುವ ಜನರೂ ಯಾಜಕರೂ ಲೇವಿಯರೂ ದೊಡ್ಡವರು ಸಣ್ಣವರು ಎಂಬ ವ್ಯತ್ಯಾಸವಿಲ್ಲದೆ ತಮ್ಮ ಅರಸನೊಂದಿಗೆ ಇದ್ದರು. ಯೋಷೀಯನು ಧರ್ಮಶಾಸ್ತ್ರವನ್ನು ಜನರಿಗೆ ಓದಿ ತಿಳಿಸಿದನು. ಆ ಪುಸ್ತಕವು ದೇವಾಲಯದಲ್ಲಿ ಸಿಕ್ಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:30
19 ತಿಳಿವುಗಳ ಹೋಲಿಕೆ  

ಆಗ ಅರಸನೂ, ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ, ಯಾಜಕರೂ, ಪ್ರವಾದಿಗಳೂ, ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರು ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.


ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರ ಮೇಲೆ ಅರಸನಾಗಿದ್ದೆ.


ಅಲ್ಲಿ ಕಿರಿಯರು ಹಿರಿಯರು ಎಂಬ ಭೇದ ಇಲ್ಲಾ; ಗುಲಾಮರು ಯಜಮಾನರಿಂದ ಬಿಡುಗಡೆಯಾಗಿರುತ್ತಾರೆ.


‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.


ಆಗ ಹಿಲ್ಕೀಯನು ಉತ್ತರಕೊಟ್ಟು ಕಾರ್ಯದರ್ಶಿಯಾದ ಶಾಫಾನನಿಗೆ, “ಯೆಹೋವ ದೇವರ ಆಲಯದಲ್ಲಿ ನಿಯಮ ಗ್ರಂಥವು ನನಗೆ ಸಿಕ್ಕಿತು,” ಎಂದು ಹೇಳಿದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು.


ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.


ಅರಸನಾದ ಯೋಷೀಯನು ಸಮಸ್ತ ಜನರಿಗೂ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರ ಪಸ್ಕಹಬ್ಬವನ್ನು ಆಚರಿಸಿರಿ,” ಎಂದು ಆಜ್ಞಾಪಿಸಿದನು.


ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ.


ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರ ಸಭೆಯಲ್ಲಿ ಓದಿದನು. ಆಗ ಅವರು, “ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ಅವುಗಳಿಗೆ ವಿಧೇಯರಾಗುವೆವು,” ಎಂದರು.


ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.


ರಾಜಕುಮಾರನು ಅವರ ಮಧ್ಯದಲ್ಲೆ ಅವರು ಒಳಗೆ ಹೋಗುವಾಗ ಒಳಗೆ ಹೋಗಬೇಕು, ಹೊರಗೆ ಹೋಗುವಾಗ ಹೊರಗೆ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು