Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:31 - ಕನ್ನಡ ಸಮಕಾಲಿಕ ಅನುವಾದ

31 ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ತನ್ನ ಸ್ಥಳದಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:31
30 ತಿಳಿವುಗಳ ಹೋಲಿಕೆ  

ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.


ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.


ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ


ಸೊಲೊಮೋನನು ಸುಮಾರು ಎರಡೂವರೆ ಮೀಟರ್ ಉದ್ದ, ಎರಡೂವರೆ ಮೀಟರ್ ಅಗಲ, ಒಂದೂವರೆ ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ, ಅಂಗಳದ ಮಧ್ಯದಲ್ಲಿಡಿಸಿದನು. ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಮೊಣಕಾಲೂರಿ ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,


ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.


ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.


ನಿಮ್ಮ ನೀತಿಯ ನಿಯಮಗಳನ್ನು ಪಾಲಿಸುವೆನೆಂದು ನಾನು ಒಂದು ಶಪಥಮಾಡಿದ್ದೇನೆ; ಅದನ್ನು ನಾನು ದೃಢಪಡಿಸುವೆನು.


ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;


“ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.


ಇದಲ್ಲದೆ ದೇವರ ಆಲಯದ ಸೇವೆಯಲ್ಲಿಯೂ, ಮೋಶೆಯ ನಿಯಮದಲ್ಲಿಯೂ, ದೇವರ ಆಜ್ಞೆಗಳಲ್ಲಿಯೂ ಅವನು ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳನ್ನು ತನ್ನ ಪೂರ್ಣಹೃದಯದಿಂದ ಮಾಡಿ, ಅವನು ಅಭಿವೃದ್ಧಿ ಹೊಂದಿದನು.


ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.


ಯೆಹೂದದವರೆಲ್ಲರು ಪ್ರಮಾಣಕ್ಕೆ ಸಂತೋಷಪಟ್ಟರು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಆಣೆ ಇಟ್ಟು, ತಮ್ಮ ಪೂರ್ಣ ಇಷ್ಟಪೂರ್ವಕವಾಗಿ ದೇವರನ್ನು ಹುಡುಕಿದರು; ದೇವರು ಅವರಿಗೆ ಸಿಕ್ಕಿದರು. ಯೆಹೋವ ದೇವರು ಅವರಿಗೆ ಸುತ್ತಲೂ ವಿಶ್ರಾಂತಿಕೊಟ್ಟರು.


ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.


ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಯೆಹೋವ ದೇವರು ಹೋರೇಬಿನಲ್ಲಿ ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ದೇಶದಲ್ಲಿ ಇಸ್ರಾಯೇಲರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ:


ನಿಮ್ಮ ದೇವರಾದ ಯೆಹೋವ ದೇವರನ್ನೇ ಅನುಸರಿಸಿ, ಅವರಿಗೆ ಭಯಪಟ್ಟು, ಅವರ ಆಜ್ಞೆಗಳನ್ನು ಕಾಪಾಡಿ, ಅವರ ಮಾತನ್ನು ಕೇಳಿ, ಅವರ ಸೇವೆಮಾಡುತ್ತಾ ಅವರನ್ನೇ ಅಂಟಿಕೊಳ್ಳಬೇಕು.


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.


ಇದಲ್ಲದೆ ಅವನು ಯೆರೂಸಲೇಮಿನಲ್ಲಿಯೂ, ಬೆನ್ಯಾಮೀನಿನಲ್ಲಿಯೂ ಪ್ರತಿಯೊಬ್ಬರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.


ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ.


ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.


ನಾವು ನಮ್ಮ ಪುತ್ರಿಯರನ್ನು ಇತರ ಜನರಿಗೆ ಕೊಡುವುದಿಲ್ಲ, ನಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳುವುದಿಲ್ಲ ಎಂದು ಆಣೆ ಮಾಡುತ್ತೇವೆ.


ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ; ನಿಮ್ಮ ಹೃದಯವು ಧೈರ್ಯದಿಂದ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು