Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:25 - ಕನ್ನಡ ಸಮಕಾಲಿಕ ಅನುವಾದ

25 ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತೆಯನ್ನು ರಚಿಸಿದನು. ಎಲ್ಲ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗು ತಮ್ಮ ಶೋಕಗೀತೆಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತೆ ಗ್ರಂಥದಲ್ಲಿ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತಗಳನ್ನು ಹಾಡುವದು ಇಸ್ರಾಯೇಲ್ಯರಲ್ಲಿ ಒಂದು ಪದ್ಧತಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:25
16 ತಿಳಿವುಗಳ ಹೋಲಿಕೆ  

ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.


ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು,


ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ ದಿನಗಳನ್ನು ಶಪಿಸುವುದರಲ್ಲಿಯೂ ನಿಪುಣರಾದವರು ಆ ದಿನವನ್ನು ಶಪಿಸಲಿ.


“ಲೆಬನೋನಿಗೆ ಹೋಗಿ ಕೂಗು, ಬಾಷಾನಿನಲ್ಲಿ ನಿನ್ನ ಸ್ವರವನ್ನೆತ್ತು, ಅಬಾರೀಮಿನಲ್ಲಿ ಮೊರೆಯಿಡು; ಏಕೆಂದರೆ ನಿನ್ನ ಜೊತೆಗಾರರು ನಾಶವಾಗಿದ್ದಾರೆ.


ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು.


ಆಗ ದಾವೀದನು ಸೌಲನ ಮೇಲೆಯೂ, ಅವನ ಮಗ ಯೋನಾತಾನನ ಮೇಲೆಯೂ ಶೋಕದಿಂದ ಈ ಗೀತೆ ಹಾಡಿ ಗೋಳಾಡಿದನು.


ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೀಗೆ ಹಾಡಿದನು: “ಬುದ್ಧಿಹೀನನು ಸತ್ತ ಹಾಗೆಯೇ, ಅಬ್ನೇರನು ಸತ್ತನೋ?


ಯೋಷೀಯನ ಮಿಕ್ಕಾದ ಕ್ರಿಯೆಗಳು ಯೆಹೋವ ದೇವರ ನಿಯಮದಲ್ಲಿ ಬರೆದಿರುವ ಪ್ರಕಾರ, ಅವನು ಮಾಡಿದ ಭಕ್ತಿಕಾರ್ಯಗಳೂ,


ಅವರ ಹೊರತಾಗಿ ಅವರ ದಾಸರೂ, ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 200 ಮಂದಿ ಇದ್ದರು.


ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


“ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ. ಈಜಿಪ್ಟಿನ ವಿಷಯವಾಗಿಯೂ ಅದರ ಎಲ್ಲಾ ಜನಸಮೂಹದ ವಿಷಯವಾಗಿಯೂ ಜನಾಂಗಗಳ ಪುತ್ರಿಯರು ಇದನ್ನು ಕುರಿತು ಗೋಳಾಡುವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎಲ್ಲಾ ಬೀದಿಗಳಲ್ಲೂ ವಿಲಾಪಗಳು, ಎಲ್ಲಾ ಸಾರ್ವಜನಿಕ ಚೌಕದಲ್ಲಿ ದುಃಖದ ಗೋಳಾಟಗಳು ಎನ್ನುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು, ಗೋಳಾಡುವುದಕ್ಕೂ ಕರೆಯಲಾಗುವುದು.


ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ತೀರ್ಪನ್ನು ಈಡೇರಿಸಿದನು. ಅವಳು ಕನ್ಯೆಯಾಗಿಯೇ ಮರಣಹೊಂದಿದಳು.


ಹೀಗೆ ವರ್ಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಪುತ್ರಿಯರು ಹೋಗಿ, ಗಿಲ್ಯಾದ್ಯನಾದ ಯೆಫ್ತಾಹನ ಮಗಳಿಗಾಗಿ ಗೋಳಾಡುವುದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು