Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:19 - ಕನ್ನಡ ಸಮಕಾಲಿಕ ಅನುವಾದ

19 ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 [ಅವನ ಜನರು] ಯೆರೂಸಲೇವಿುನ ಪೌಳಿಗೋಡೆಗಳನ್ನು ಕೆಡವಿ ಅವರ ಎಲ್ಲಾ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟುಬಿಟ್ಟು ಅಮೂಲ್ಯ ವಸ್ತುಗಳನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:19
22 ತಿಳಿವುಗಳ ಹೋಲಿಕೆ  

ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು, ನಿಮ್ಮ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.


ಆದರೆ ಯೇಸು, “ನೀವು ಕಾಣುತ್ತಿರುವ ಇವೆಲ್ಲವೂ ಕೆಡವಿಹಾಕಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯದ ಕಾಲ ಬರುವುದು,” ಎಂದರು.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಬಂಗಾರವು ಹೇಗೆ ಮಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧಸ್ಥಳದ ಕಲ್ಲುಗಳೂ ಬೀದಿಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.


ಆದಕಾರಣ ನನ್ನ ಹೆಸರಿನಿಂದ ಕರೆಯಲಾದಂಥ ಮತ್ತು ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ, ನಿಮ್ಮ ಪಿತೃಗಳಿಗೆ ಕೊಟ್ಟ ಸ್ಥಳಕ್ಕೂ, ಶೀಲೋವಿಗೆ ಮಾಡಿದ ಹಾಗೆ ಮಾಡುವೆನು.


“ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.


ಏಕೆಂದರೆ ಅವರು ಯಾಕೋಬರನ್ನು ನುಂಗಿಬಿಟ್ಟಿದ್ದಾರೆ. ಅವರ ನಿವಾಸವನ್ನು ಹಾಳು ಮಾಡಿದ್ದಾರೆ.


ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.


“ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.


ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’


ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ”


ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರು ಬಂದು, ಈ ಪಟ್ಟಣಕ್ಕೆ ಬೆಂಕಿ ಹಚ್ಚಿ; ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವನ್ನರ್ಪಿಸಿ, ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ ಅವುಗಳನ್ನೂ ಸುಟ್ಟುಬಿಡುವರು.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.


‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.


ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು