Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:2 - ಕನ್ನಡ ಸಮಕಾಲಿಕ ಅನುವಾದ

2 ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು; ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್; ಅದರ ಎತ್ತರ ಸುಮಾರು ಎರಡು ಮೀಟರ್; ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೊಲೊಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನಂತರ ಅವನು ‘ಕಂಚಿನ ಕಡಲು’ ಎನಿಸಿಕೊಳ್ಳುವ ಎರಕದ ಒಂದು ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನಂತರ ಅವನು ಸಮುದ್ರವೆನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿಸಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಎರಕಹೊಯ್ದ ದೊಡ್ಡ ಗಾತ್ರದ ನೀರಿನ ಪಾತ್ರೆಯನ್ನು ಮಾಡಿಸಿದನು. ಇದು ದುಂಡಾಕಾರವಾಗಿದ್ದು ಅದರ ಬಾಯಿಯ ಅಂಚಿನಿಂದ ಅಂಚಿಗೆ ಹತ್ತು ಮೊಳ ಅಗಲವಿತ್ತು; ಅದರ ಸುತ್ತಳತೆ ಮೂವತ್ತು ಮೊಳ; ಎತ್ತರ ಐದು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:2
10 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಅದರ ಅಂಚಿನ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೀಟರಿಗೆ ಹತ್ತರಂತೆ, ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು; ಇದು ಎರಕ ಹೊಯ್ಯುವಾಗ, ಎತ್ತುಗಳ ರೂಪಗಳು ಎರಡು ಸಾಲಾಗಿ ಎರಕ ಹೊಯ್ಸಿದನು.


ಅನಂತರ ಅವರು ಬಲಿಪೀಠದ ಉಪಕರಣಗಳನ್ನೆಲ್ಲಾ ಅಂದರೆ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಇವುಗಳೆನ್ನೆಲ್ಲಾ ಕಂಚಿನಿಂದ ಮಾಡಿದರು.


ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಸೇವೆಮಾಡುತ್ತಿದ್ದ ಸ್ತ್ರೀಯರಿಂದ ಕೂಡಿಸಿದ ಕಂಚಿನ ದರ್ಪಣಗಳಿಂದ ಕಂಚಿನಿಂದ ಬೋಗುಣಿಯನ್ನು ಅದರ ಪೀಠವನ್ನೂ ಮಾಡಿದರು.


ಇದಲ್ಲದೆ ಹದದೆಜೆರನ ಪಟ್ಟಣಗಳಾದ ಟಿಭತಿನಿಂದಲೂ, ಕೂನ್‌ದಿಂದಲೂ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು. ಅದರಿಂದ ಸೊಲೊಮೋನನು ಕಂಚಿನ ಕೊಳವನ್ನೂ, ಸ್ತಂಭಗಳನ್ನೂ, ವಿವಿಧ ಪಾತ್ರೆಗಳನ್ನೂ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು