Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:6 - ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ, ಅವುಗಳಲ್ಲಿ ತೊಳೆಯುವ ನಿಮಿತ್ತವಾಗಿ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿದನು. ದಹನಬಲಿಗೋಸ್ಕರ ಅರ್ಪಿಸುವವುಗಳನ್ನು ಅವುಗಳಲ್ಲಿ ತೊಳೆಯುತ್ತಿದ್ದರು. ಆದರೆ ಆ ಕೊಳವು ಯಾಜಕರು ತೊಳೆದುಕೊಳ್ಳುವುದಕ್ಕೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಹೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಆದರೆ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ ಅವನು ಹತ್ತು ನೀರಿನ ಬಾನೆಗಳನ್ನು ಮಾಡಿಸಿ ದಹನಬಲಿ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಕಡಲು ಎನಿಸಿಕೊಳ್ಳುವ ಪಾತ್ರೆ ಯಾಜಕರ ಸ್ನಾನಕ್ಕಾಗಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಅವನು ಹತ್ತು ಗಂಗಾಳಗಳನ್ನು ಮಾಡಿಸಿ ಸರ್ವಾಂಗಹೋಮಸಮರ್ಪಣೆಯ ಸಾಮಾನು ತೊಳೆದು ಶುದ್ಧಮಾಡುವದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಸಮುದ್ರವೆನಿಸಿಕೊಳ್ಳುವ ಪಾತ್ರೆಯು ಯಾಜಕರ ಸ್ನಾನಕ್ಕಾಗಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೊಲೊಮೋನನು ಹತ್ತು ಗಂಗಾಳಗಳನ್ನು ಮಾಡಿಸಿದನು. ಐದು ಗಂಗಾಳಗಳನ್ನು ತಾಮ್ರದ ನೀರಿನ ತೊಟ್ಟಿಯ ಬಲಗಡೆಯಲ್ಲಿಡಿಸಿದನು. ಉಳಿದ ಐದು ಗಂಗಾಳಗಳನ್ನು ಪಾತ್ರೆಯ ಎಡಗಡೆಯಲ್ಲಿಡಿಸಿದನು. ಈ ಗಂಗಾಳಗಳ ನೀರನ್ನು ಯಜ್ಞ ಮಾಡಲಿಕ್ಕಿರುವ ಪದಾರ್ಥಗಳನ್ನು ತೊಳೆಯುವದಕ್ಕಾಗಿ ಉಪಯೋಗಿಸಿದರು. ಯಾಜಕರು ಯಜ್ಞಗಳನ್ನು ಅರ್ಪಿಸುವ ಮೊದಲು ತಮ್ಮನ್ನು ಶುದ್ಧ ಮಾಡಿಕೊಳ್ಳುವದಕ್ಕಾಗಿ ದೊಡ್ಡ ತಾಮ್ರದ ಪಾತ್ರೆಯ ನೀರನ್ನು ಉಪಯೋಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:6
16 ತಿಳಿವುಗಳ ಹೋಲಿಕೆ  

ಹತ್ತು ಕಂಚಿನ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು 800 ಲೀಟರ್ ನೀರು ಹಿಡಿಯುತ್ತಿತ್ತು. ಒಂದೊಂದು ತೊಟ್ಟಿಯು 2 ಮೀಟರ್ ಇದ್ದವು. ಪ್ರತಿಯೊಂದು ಪೀಠಗಳ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.


ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಿಲುಗಳ ಕಂಬಗಳ ಬಳಿಯಲ್ಲಿ, ದಹನಬಲಿಯನ್ನು ತೊಳೆಯುವಲ್ಲಿ ಇದ್ದವು;


ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.


ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು:


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತೆ ಇರುವ ವಸ್ತುಗಳನ್ನು ಈ ಯಜ್ಞಗಳಿಂದ ಶುದ್ಧಿಮಾಡುವುದು ಅವಶ್ಯವಾಗಿದೆ. ಹಾಗಾದರೆ ಪರಲೋಕದ ನಿಜ ವಸ್ತುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯಕವಾಗಿವೆ.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು; ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್; ಅದರ ಎತ್ತರ ಸುಮಾರು ಎರಡು ಮೀಟರ್; ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು;


ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ತಂದು, ನೀರಿನಲ್ಲಿ ಅವರನ್ನು ತೊಳೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು