Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:13 - ಕನ್ನಡ ಸಮಕಾಲಿಕ ಅನುವಾದ

13 ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 [ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:13
32 ತಿಳಿವುಗಳ ಹೋಲಿಕೆ  

ಪರಸ್ಪರವಾಗಿ ಹಾಡುತ್ತಾ, ಕೃತಜ್ಞತಾಸ್ತುತಿ ಮಾಡುತ್ತಾ ಯೆಹೋವ ದೇವರನ್ನು ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು! ಅವರ ಅಚಲ ಪ್ರೀತಿ ಇಸ್ರಾಯೇಲರ ಮೇಲೆ ಶಾಶ್ವತ!” ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ, ಯೆಹೋವ ದೇವರ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”


ನಿನ್ನ ಕಾವಲುಗಾರರು ಧ್ವನಿಯನ್ನೆತ್ತುವರು. ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು. ಏಕೆಂದರೆ ಯೆಹೋವ ದೇವರು ಚೀಯೋನನ್ನು ತಿರುಗಿ ತರುವಾಗ, ಅವರು ಅದನ್ನು ತಮ್ಮ ಕಣ್ಣಿನಿಂದಲೇ ಕಾಣುವರು.


ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.


ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.


ಹೀಗೆ ನೀವು ಒಂದೇ ಮನಸ್ಸುಳ್ಳವರಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರನ್ನು ಒಂದೇ ಬಾಯಿಂದ ಮಹಿಮೆ ಪಡಿಸುವಿರಿ.


ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.


ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು; ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.


ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.


ಅಲ್ಲಿ ನಾನು ಇಸ್ರಾಯೇಲರನ್ನು ಸಂಧಿಸುವೆನು. ಅದು ನನ್ನ ಮಹಿಮೆಯಿಂದ ಪವಿತ್ರವಾಗುವುದು.


ಇದಲ್ಲದೆ ಯೆಹೋವ ದೇವರ ಮಂಜೂಷದ ಮುಂದೆ ಸೇವೆಮಾಡಲೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ಮರಿಸುವುದಕ್ಕೂ, ಕೊಂಡಾಡುವುದಕ್ಕೂ, ಹೊಗಳುವುದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.


ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ, ಬೆಂಕಿಯು ಆಕಾಶದಿಂದ ಇಳಿದು ದಹನಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿತು.


ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿದ್ದರಿಂದ ಯಾಜಕರು ಆಲಯದಲ್ಲಿ ಹೋಗಲಾರದೆ ಇದ್ದರು.


ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.


ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.


ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ, ಹಾಡುವುದರಿಂದಲೂ, ತಾಳಗಳಿಂದಲೂ, ವೀಣೆಗಳಿಂದಲೂ, ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವುದಕ್ಕೆ ಲೇವಿಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.


ನಿಮ್ಮಲ್ಲಿಯೇ ನಮ್ಮ ಪಿತೃಗಳು ಭರವಸೆಯಿಟ್ಟರು; ಅವರು ಭರವಸೆಯಿಟ್ಟಿದ್ದರಿಂದ ನೀವು ಅವರನ್ನು ವಿಮೋಚಿಸಿದಿರಿ.


ವಾದ್ಯ ಪ್ರಾರಂಭಿಸಿರಿ; ದಮ್ಮಡಿಯನ್ನೂ, ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ಬಾರಿಸಿರಿ.


ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ, ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ.


ತಾಳಗಳಿಂದ ದೇವರನ್ನು ಸ್ತುತಿಸಿರಿ; ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು