Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:5 - ಕನ್ನಡ ಸಮಕಾಲಿಕ ಅನುವಾದ

5 ದೇವರು ತಮ್ಮ ಬಾಯಿಂದ, ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ ಆಲಯವನ್ನು ಕಟ್ಟುವುದಕ್ಕೆ, ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ಆರಿಸಿಕೊಳ್ಳಲಿಲ್ಲ. ನನ್ನ ಜನರಾದ ಇಸ್ರಾಯೇಲರ ಮೇಲೆ ಆಳುವವನಾಗಿರಲು ನಾನು ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು, ‘ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಇಸ್ರಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ಆಲಯಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು - ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ನಾನು ಬರಮಾಡಿದ್ದು ಮೊದಲುಗೊಂಡು ಇಸ್ರಾಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ನನ್ನ ನಾಮದ ನಿವಾಸಕ್ಕೋಸ್ಕರ ಆಲಯಸ್ಥಾನವನ್ನಾಗಿ ಆರಿಸಿಕೊಂಡಿರಲಿಲ್ಲ; ನನ್ನ ಪ್ರಜೆಯಾದ ಇಸ್ರಾಯೇಲ್ಯರ ಪ್ರಭುವಾಗುವದಕ್ಕಾಗಿ ಯಾವನೊಬ್ಬ ಪುರುಷನನ್ನು ಆರಿಸಿಕೊಂಡದ್ದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ‘ಈಜಿಪ್ಟಿನಿಂದ ನನ್ನ ಜನರನ್ನು ಬಿಡಿಸಿ ಹೊರ ತಂದಂದಿನಿಂದ ನನ್ನ ಆಲಯಕೋಸ್ಕರ ಇಸ್ರೇಲರ ಕುಲಗಳ ಯಾವ ಪಟ್ಟಣವನ್ನೂ ನಾನು ಆರಿಸಿಕೊಳ್ಳಲಿಲ್ಲ. ಇಸ್ರೇಲರನ್ನು ನಡಿಸುವುದಕ್ಕಾಗಿ ಒಬ್ಬ ನಾಯಕನನ್ನೂ ನಾನು ಆರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:5
25 ತಿಳಿವುಗಳ ಹೋಲಿಕೆ  

ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.”


‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ, ಆಲಯವನ್ನು ಕಟ್ಟುವುದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆಯ್ದುಕೊಳ್ಳದೆ, ನನ್ನ ಜನರಾದ ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನು ಆಯ್ದುಕೊಂಡೆನು,’ ಎಂಬುದು.


ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”


ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು.


ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.


“ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ನಂತರ ಅರಸನು ಹೀಗೆ ಹೇಳಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.


ಏಕೆಂದರೆ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು, ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಒಂದು ಗುಡಾರದ ಸ್ಥಳದಿಂದ ಇನ್ನೊಂದು ಗುಡಾರದ ಸ್ಥಳಕ್ಕೂ, ಒಂದು ತಂಗುವ ಸ್ಥಳದಿಂದ ಇನ್ನೊಂದು ತಂಗುವ ಸ್ಥಳಕ್ಕೂ ಹೋಗುತ್ತಿದ್ದೆನು.


ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವಂತೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.


ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.


ಅವರು ಅದರಲ್ಲಿ ನಿವಾಸಮಾಡಿ, ಅದರಲ್ಲಿ ನಿಮ್ಮ ಹೆಸರಿಗೆ ಪರಿಶುದ್ಧವಾದ ಸ್ಥಳವನ್ನು ಕಟ್ಟಿಸಿ,


‘ನಿಮ್ಮ ಹೆಸರು ಈ ಆಲಯದಲ್ಲಿರುವುದರಿಂದ ಖಡ್ಗವೂ ನ್ಯಾಯತೀರಿಸುವ ಶಿಕ್ಷೆಯೂ, ಘೋರವ್ಯಾಧಿಯೂ ಬರವೇನಾದರೂ ನಮ್ಮ ಮೇಲೆ ಬಂದರೆ, ನಾವು ಈ ಆಲಯದ ಮುಂದೆಯೂ, ನಿಮ್ಮ ಸಮ್ಮುಖದಲ್ಲಿಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿಮ್ಮನ್ನು ಕೂಗುವಾಗ, ನೀವು ಕೇಳಿ ರಕ್ಷಿಸುವಿರಿ,’ ಎಂದು ಹೇಳಲಿಲ್ಲವೇ?


ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ಇದಲ್ಲದೆ ಯೆರೂಸಲೇಮಿನಲ್ಲಿ, “ನನ್ನ ಹೆಸರು ಯುಗಯುಗಕ್ಕೂ ಇರುವುದು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಹಳ ಬಲಿಪೀಠಗಳನ್ನು ಕಟ್ಟಿಸಿದನು.


ಮನಸ್ಸೆಯು ತಾನು ಮಾಡಿದ ವಿಗ್ರಹವನ್ನು ದೇವರ ಆಲಯದಲ್ಲಿ ಇಟ್ಟನು. ಆ ಆಲಯದ ಬಗ್ಗೆ ದೇವರು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಹೇಳಿದ್ದೇನೆಂದರೆ, “ನಾನು ಈ ಆಲಯದಲ್ಲಿ ಮತ್ತು ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಶಾಶ್ವತವಾಗಿ ಸ್ಥಾಪಿಸುತ್ತೇನೆ.


ಬಾಬಿಲೋನ್ ಸಂಸ್ಥಾನದಲ್ಲಿ ಸಿಕ್ಕುವ ಬೆಳ್ಳಿಬಂಗಾರವನ್ನು ಹಾಗು ಇಸ್ರಾಯೇಲ್ ಜನ ಸಾಮಾನ್ಯರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ, ನಾನೂ ಮತ್ತು ನನ್ನ ಏಳುಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ.


ಆಗ ಯೆಹೋವ ದೇವರ ದೂತನು ಸೈತಾನನಿಗೆ, “ಸೈತಾನನೇ, ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಯೆರೂಸಲೇಮನ್ನು ಆಯ್ದುಕೊಂಡ ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಅದು ಬೆಂಕಿಯೊಳಗಿಂದ ಎಳೆದ ಕೊಳ್ಳಿಯಾಗಿದೆಯಲ್ಲವೋ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು