Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:13 - ಕನ್ನಡ ಸಮಕಾಲಿಕ ಅನುವಾದ

13 “ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲು, ನಾಡನ್ನು ನಾಶಮಾಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲು ಹಾಗೂ ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ ದೇಶವನ್ನು ತಿಂದುಬಿಡುವದಕ್ಕೆ ವಿುಡಿತೆಗಳನ್ನು ಕಳುಹಿಸುವಾಗಲೂ ನನ್ನ ಪ್ರಜೆಯ ಮೇಲೆ ಘೋರ ವ್ಯಾಧಿಯನ್ನು ಬರಮಾಡುವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಮಳೆ ಬಾರದಂತೆ ಆಕಾಶವನ್ನು ಮುಚ್ಚಿದರೆ, ಅಥವಾ ಮಿಡತೆಗಳಿಗೆ ದೇಶವನ್ನು ಹಾಳುಮಾಡಲು ಅಪ್ಪಣೆಕೊಟ್ಟರೆ ಅಥವಾ ಜನರಿಗೆ ರೋಗವನ್ನು ಬರಮಾಡಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:13
17 ತಿಳಿವುಗಳ ಹೋಲಿಕೆ  

ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ.


ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.


“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:


“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.


ದೇವರು ಕೆಡವಿದ್ದನ್ನು ತಿರುಗಿ ಕಟ್ಟಲಾಗುವುದಿಲ್ಲ; ದೇವರು ಸೆರೆಯಲ್ಲಿ ಹಾಕುವ ಮನುಷ್ಯನನ್ನು ಯಾರೂ ಬಿಡಿಸಲಾಗುವುದಿಲ್ಲ.


ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ದೇವರು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು.


“ದೇವರು ಬಂದು ನಿನ್ನನ್ನು ಸೆರೆಮನೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ, ದೇವರನ್ನು ತಡೆಯುವವರು ಯಾರು?


ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು.


“ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು