Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:20 - ಕನ್ನಡ ಸಮಕಾಲಿಕ ಅನುವಾದ

20 ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವುಗಳಿಗೆ ಕೈಮುಗಿಯುವದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಕಿತ್ತುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಟ್ಟು ಎಲ್ಲಾ ಜನಾಂಗಗಳವರು ಗಾದೆಗಳನ್ನು ಕಲ್ಪಿಸುವದಕ್ಕೂ ನಿಂದಿಸುವದಕ್ಕೂ ಅದು ಆಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದುಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿಮಾಡುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:20
21 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಸಂತತಿಯನ್ನೆಲ್ಲಾ ಅಲಕ್ಷ್ಯಮಾಡಿ, ಅವರನ್ನು ಕುಂದಿಸಿ, ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಡುವವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.


ಆದರೆ ನಿಮಗೆ ಹೇಳಲು ಯೆಹೋವ ದೇವರು ನನಗೆ ಹೇಳಿದ್ದಾರೆ. ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ. ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.


‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.


ಯೆಹೋವ ದೇವರು ಅವರನ್ನು ತೀವ್ರಕೋಪದಲ್ಲಿಯೂ, ಮಹಾ ಆಸಕ್ತಿಯಲ್ಲಿಯೂ ದೇಶದಿಂದ ಕಿತ್ತುಹಾಕಿ, ಇಂದು ಇರುವ ಪ್ರಕಾರ ಅವರನ್ನು ಬೇರೆ ದೇಶಕ್ಕೆ ಕಳುಹಿಸಿದ್ದಾರೆ.”


ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಇತರ ದೇಶಗಳವರ ಗಾದೆಗೆ ಆಸ್ಪದ ಮಾಡಿರುವಿರಿ; ಅವರು ನಮ್ಮನ್ನು ಪರಿಹಾಸ್ಯದ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ.


ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ


ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವುದಕ್ಕೂ ಕೆಡವುದಕ್ಕೂ ನಾಶಮಾಡುವುದಕ್ಕೂ ಮಾತಾಡುತ್ತೇನೋ,


ಆದರೆ ಅವರು ಕೇಳದೆ ಹೋದರೆ, ಆ ಜನಾಂಗವನ್ನು ಸಂಪೂರ್ಣವಾಗಿ ಕಿತ್ತು ನಾಶಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು.


ಏಕೆಂದರೆ ನೀವು ದೇವರ ಕಡೆಯಿಂದ ತೊಲಗಿದರೆ, ದೇವರು ಅವರನ್ನು ಮರುಭೂಮಿಯಲ್ಲಿಯೇ ಇರಿಸಿಬಿಡುವನು. ನೀವು ಈ ಸಮಸ್ತ ಜನರ ನಾಶಕ್ಕೆ ನೀವೇ ಕಾರಣರಾಗುವಿರಿ,” ಎಂದು ಹೇಳಿದನು.


ಆದ್ದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ, ನಿಮಗೂ, ನಿಮ್ಮ ಪಿತೃಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು. ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆ ಮಾಡುವಿರಿ ಮತ್ತು ನಾನು ನಿಮಗೆ ಕನಿಕರ ತೋರಿಸುವುದಿಲ್ಲ.’


“ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು. ‘ಯೆಹೋವ ದೇವರು ಈ ದೊಡ್ಡ ಪಟ್ಟಣಕ್ಕೆ ಏಕೆ ಈ ಪ್ರಕಾರ ಮಾಡಿದ್ದಾರೆ?’ ಎಂದು ಒಬ್ಬರಿಗೊಬ್ಬರು ಹೇಳಿಕೊಳ್ಳುವರು.


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.


ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು