Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:21 - ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು, ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಉನ್ನತವಾದ ಈ ಮಂದಿರದ ಮಾರ್ಗವಾಗಿ ಹೋಗುವವರು ಇದನ್ನು ನೋಡಿ ವಿಸ್ಮಿತರಾಗಿ, ‘ಸರ್ವೇಶ್ವರ ಈ ನಾಡನ್ನೂ ಈ ಆಲಯವನ್ನೂ ಹೀಗೇಕೆ ಮಾಡಿಬಿಟ್ಟರು?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಉನ್ನತವಾದ ಈ ಮಂದಿರದ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ - ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅತ್ಯಂತ ಪ್ರಸಿದ್ಧಿಹೊಂದಿದ ಈ ದೇವಾಲಯವನ್ನು ನೋಡುವ ಪ್ರತಿಯೊಬ್ಬನು, ‘ದೇವರು ಈ ದೇಶಕ್ಕೆ ಮತ್ತು ಈ ಆಲಯಕ್ಕೆ ಹೀಗೇಕೆ ಮಾಡಿದನು?’ ಎಂದು ಅಚ್ಚರಿಪಡುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:21
12 ತಿಳಿವುಗಳ ಹೋಲಿಕೆ  

ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.


ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ; ಸಂಪೂರ್ಣ ಹಾಳಾಗುವುದು; ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಗಾಯಗಳ ವಿಷಯ ವಿಸ್ಮಯಪಟ್ಟು ಸಿಳ್ಳುಹಾಕುವರು.


“ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.


ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದುಹೋದ ಮಡಿಕೆಯೆ? ಮೆಚ್ಚುಗೆ ಇಲ್ಲದ ಪಾತ್ರೆಯೆ? ಏಕೆ ಕೊನ್ಯನೂ, ಅವನ ಸಂತಾನವೂ ಬೀದಿಪಾಲಾಗಿದ್ದಾರೆ, ತಮಗೆ ತಿಳಿಯದ ದೇಶಕ್ಕೆ ಗಡಿಪಾರಾಗಿದ್ದಾರೆ?


ಒಂದು ವೇಳೆ, “ಇವು ನನಗೆ ಏಕೆ ಸಂಭವಿಸಿದವು?” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ನೆರಿಗೆಯು ಕೀಳಲಾಗುವುದು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


“ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’


ಆದ್ದರಿಂದ ಯೆಹೂದ ಮತ್ತು ಯೆರೂಸಲೇಮಿನವರ ಮೇಲೆ ಯೆಹೋವ ದೇವರು ಕೋಪಗೊಂಡು, ಅವುಗಳನ್ನು ಭಯಭೀತಿಗೂ, ಅಪಹಾಸ್ಯಗಳಿಗೂ ಆಸ್ಪದ ಮಾಡಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.


ಆದರೆ ನೀವು ಈ ವಾಕ್ಯಗಳನ್ನು ಕೇಳದೆ ಹೋದರೆ, ಈ ಅರಮನೆ ಹಾಳಾಗುವುದು ಎಂದು ನನ್ನ ಮೇಲೆ ಆಣೆ ಇಡುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು