Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:4 - ಕನ್ನಡ ಸಮಕಾಲಿಕ ಅನುವಾದ

4 ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ, ಅರಸನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗ ಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿದ್ದ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೆಲ್ಲಾ ನೋಡಿದಳು. ಅಂತೆಯೇ ಅವನು ಸರ್ವೇಶ್ವರನ ಆಲಯದಲ್ಲಿ ಸಮರ್ಪಿಸುತ್ತಿದ್ದ ದಹನ ಬಲಿಗಳನ್ನೂ ಗಮನಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನ ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೊಲೊಮೋನನ ಮೇಜಿನ ಮೇಲೆ ಇಟ್ಟಿರುವ ಆಹಾರವನ್ನು ನೋಡಿದಳು. ಅವನ ಸೇವಕರು ಮಾಡುವ ಸೇವೆಯ ರೀತಿಯನ್ನು ಪರಿಶೀಲಿಸಿದಳು. ಅವರು ಧರಿಸುವ ಉಡುಪು, ಸಮವಸ್ತ್ರಗಳು, ದೇವಾಲಯಕ್ಕೆ ಹೋಗುವಾಗ ಮಾಡುವ ಮೆರವಣಿಗೆಗಳನ್ನು ಮತ್ತು ಯಜ್ಞಗಳನ್ನು ನೋಡಿದಳು. ಪ್ರತಿಯೊಂದು ವಿಷಯವನ್ನು ಆಕೆ ಗಮನಿಸಿದಾಗ ಅಚ್ಚರಿಗೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:4
22 ತಿಳಿವುಗಳ ಹೋಲಿಕೆ  

ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ


ಯಜಮಾನನು ಬಂದಾಗ ಯಾರು ಎಚ್ಚರವಾಗಿರುವುದನ್ನು ಅವನು ಕಾಣುವನೋ ಆ ಸೇವಕರು ಧನ್ಯರು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿ ನಿಂತು ಅವರನ್ನು ಊಟಕ್ಕೆ ಕೂರಿಸಿ, ಅವರಿಗೆ ತಾನೇ ಸೇವೆಮಾಡುವನು.


ನನ್ನ ಒಡೆಯನ ದಾಸನಾದ ನನ್ನಂಥವನು ನನ್ನ ಒಡೆಯನಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ, ಉಸಿರಾಡಿಸಲೂ ಆಗದು.”


ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.


ಇದು ಪ್ರಭುವಿಗಾಗಿ ಇದೆ; ಪ್ರಭುವು ಅವರೊಳಗೆ ಕುಳಿತುಕೊಂಡು, ಯೆಹೋವ ದೇವರ ಮುಂದೆ ರೊಟ್ಟಿಯನ್ನು ತಿನ್ನಬೇಕು. ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.”


ಯೆರೂಸಲೇಮಿನ ಪುತ್ರಿಯರೇ, ನಿಮಗೆ ಆಣೆಯಿಟ್ಟು ಹೇಳುತ್ತೇನೆ. ನೀವು ನನ್ನ ಪ್ರಿಯನನ್ನು ಕಂಡರೆ, ನಾನು ಪ್ರೀತಿಯಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.


“ಬಾ, ನನ್ನ ಆಹಾರವನ್ನು ತಿಂದು, ನಾನು ಬೆರೆಸಿದ ದ್ರಾಕ್ಷಾರಸವನ್ನು ಕುಡಿ,” ಎಂದೂ


ಯೆಹೋವ ದೇವರೇ, ನನಗೆ ಬೇಗನೆ ಉತ್ತರಕೊಡಿರಿ; ನನ್ನ ಪ್ರಾಣವು ಕುಂದಿಹೋಗಿದೆ; ನಿಮ್ಮ ಮುಖವನ್ನು ನನಗೆ ಮರೆಮಾಡಬೇಡ; ಇಲ್ಲವಾದರೆ ಸಮಾಧಿಯಲ್ಲಿ ಇಳಿಯುವವರಿಗೆ ಸಮಾನನಾಗಿಬಿಡುತ್ತೇನೆ.


ನನ್ನ ಪ್ರಾಣವು ನಿಮ್ಮ ರಕ್ಷಣೆಯ ಬಯಕೆಯಿಂದಲೇ ಕುಗ್ಗಿ ಹೋಗುತ್ತಿದೆ, ಆದರೂ ನಾನು ನಿಮ್ಮ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.


ಇವರು ಈವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲಲ್ಲಿ ಕಾದುಕೊಂಡಿದ್ದರು. ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.


ಯೆಹೋವ ದೇವರ ಆಲಯದ ಪ್ರಾಕಾರದ ಒಳಗೆ ಸಬ್ಬತ್ ದಿನದ ಆರಾಧನೆಗಾಗಿ, ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದನು, ಇವುಗಳನ್ನೆಲ್ಲ ಅಸ್ಸೀರಿಯದ ಅರಸನ ನಿಮಿತ್ತವಾಗಿ ಆಹಾಜನೇ ಬದಲಾಯಿಸಿದನು.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.


ಶೆಬದ ರಾಣಿಯು ಸೊಲೊಮೋನನ ಜ್ಞಾನವನ್ನೂ, ಅವನು ಕಟ್ಟಿಸಿದ ಅರಮನೆಯನ್ನೂ,


ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ.


ಸೊಲೊಮೋನನು ರಾಜದೂತರ ಮುಖಾಂತರ ಹೀರಾಮನಿಗೆ ಈ ಸಂದೇಶವನ್ನು ಕಳುಹಿಸಿದನು:


“ನನ್ನ ತಂದೆ ದಾವೀದನು ತನ್ನ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಏಕೆಂದರೆ ಯೆಹೋವ ದೇವರು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವವರೆಗೂ, ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು