Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:10 - ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಸೆ ರ್‍ಹಾತಾನಾ, ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮ್ಚೆ ಎಚುನ್ ಘೆಟ್ನೆ ಘಟ್ ಕರ್‍ತಲ್ಯಾ ಹುಕುಮಾಕ್ನಿ ಲೈ ಉಮ್ಮೆದ್ ಥವಾ, ಅಸೆ ಕರ್ಲ್ಯಾರ್ ತುಮಿ ಕನ್ನಾಬಿ ಅಟ್ಕಳುನ್ ಪಡಿನ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:10
31 ತಿಳಿವುಗಳ ಹೋಲಿಕೆ  

ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ.


ಅಂತ್ಯದವರೆಗೆ ನೀವು ನಿಮ್ಮ ನಿರೀಕ್ಷೆಯ ಪೂರ್ಣ ನಿಶ್ಚಯವನ್ನು ಗ್ರಹಿಸುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.


ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ.


ನನ್ನ ಶತ್ರುವೇ, ನನ್ನ ಮೇಲೆ ಸಂತೋಷ ಪಡಬೇಡ, ನಾನು ಬಿದ್ದಿದ್ದರೂ ತಿರುಗಿ ಏಳುವೆನು. ನಾನು ಕತ್ತಲೆಯಲ್ಲಿ ಕುಳಿತುಕೊಂಡರೂ ಯೆಹೋವ ದೇವರೇ ನನಗೆ ಬೆಳಕಾಗಿರುವರು.


ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.


ಈ ಕಾರಣದಿಂದಲೇ ನೀವು ಪೂರ್ಣಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ದೇವರು ಮಾತ್ರವೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಇದನ್ನು ಮಾಡುವ ಮನುಷ್ಯನೂ, ಇದನ್ನು ಹಿಡಿದುಕೊಳ್ಳುವವರ ಪುತ್ರನೂ ಎಂದರೆ ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಗೊಳ್ಳುವವನೂ ಮತ್ತು ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.”


ದೇವರೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.


ಅವನು ಎಡವಿದರೂ ಬಿದ್ದುಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ತಾವೇ ತಮ್ಮ ಕೈಯಿಂದ ಅವನನ್ನು ಎತ್ತಿಹಿಡಿಯುವರು.


ಈ ನಿರೀಕ್ಷೆಯು ನಮ್ಮ ಆತ್ಮಕ್ಕೆ ನಿಶ್ಚಯವಾದದ್ದೂ ಸ್ಥಿರವಾದದ್ದೂ ಆಗಿರುವ ಲಂಗರದ ಹಾಗಿದೆ. ಅದು ಅತಿ ಪರಿಶುದ್ಧಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದೂ ಆಗಿದೆ.


ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.


“ಹೀಗೆಯೇ ಆಹ್ವಾನಿತರಾದವರು ಅನೇಕರು, ಆದರೆ ಆಯ್ಕೆಯಾದವರು ಕೆಲವರು ಮಾತ್ರ,” ಎಂದನು.


ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ.


ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ.


ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.


ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ಯೆಹೋಶುವನ ಬಳಿಗೆ ತಿರುಗಿಬಂದು ಅವನಿಗೆ, “ಜನರೆಲ್ಲರೂ ಹೋಗುವ ಅವಶ್ಯಕತೆ ಇಲ್ಲ, ಆಯಿ ಎಂಬ ಪಟ್ಟಣವನ್ನು ಹೊಡೆಯುವುದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಹೋದರೆ ಸಾಕು. ಸೈನ್ಯವನ್ನು ಕಳುಹಿಸಿ ದಣಿಸಬೇಡ. ಏಕೆಂದರೆ ಸ್ವಲ್ಪ ಜನರು ಮಾತ್ರ ಅಲ್ಲಿ ಇದ್ದಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು