Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:3 - ಕನ್ನಡ ಸಮಕಾಲಿಕ ಅನುವಾದ

3 ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸುವಿಗೆ ದೇವರ ಶಕ್ತಿಯಿದೆ. ಜೀವಿಸಲು ಮತ್ತು ದೇವರ ಸೇವೆ ಮಾಡಲು ಬೇಕಾದ ಪ್ರತಿಯೊಂದನ್ನು ಆತನ ಶಕ್ತಿಯು ನಮಗೆ ಒದಗಿಸಿದೆ. ನಾವು ಆತನನ್ನು ಬಲ್ಲವರಾದ್ದರಿಂದಲೇ ಅವುಗಳನ್ನು ಪಡೆದುಕೊಂಡಿದ್ದೇವೆ. ಯೇಸು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ನಮ್ಮನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚ್ಯಾ ದೈವಿಕ್ ಬಳಾನ್ ಅಮ್ಕಾ ಅಮ್ಚ್ಯಾ ಜಿವನಾಕ್ ಅನಿ ದೆವಸ್ಪಾನಾಕ್ ಪಾಜೆ ಹೊಲ್ಲೆ ಸಗ್ಳೆ ದಿಲ್ಯಾನಾಯ್, ತೆಚ್ಯಾ ಶಾನ್ಪಾನಾಚ್ಯಾ ವೈನಾ ಅಮ್ಕಾ ತೆನಿ ಅಪ್ನಾಚ್ಯಾ ಸ್ವತಾಚ್ಯಾ ಮಹಿಮೆನ್ ಅನಿ ಬರೆಪಾನಾನ್ ಬಲ್ವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:3
39 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ಅದಕ್ಕೆ ಕರ್ತ ಯೇಸು, “ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು,” ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.


ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.


ನಾವು ನಿಮಗೆ ತಿಳಿಸಿದ ಸುವಾರ್ತೆಯ ಮೂಲಕವಾಗಿ, ನೀವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಿಮ್ಮನ್ನು ಈ ಆಯ್ಕೆಗಾಗಿ ಕರೆದರು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ.


ಆದರೆ ನಿಮ್ಮನ್ನು ಕರೆದಿರುವ ದೇವರು ಪರಿಶುದ್ಧರಾಗಿರುವ ಪ್ರಕಾರವೇ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ದೇವರ ವಿಷಯವಾಗಿಯೂ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿಯೂ ಇರುವ ತಿಳುವಳಿಕೆಯ ಮೂಲಕ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಈ ಕಾರಣದಿಂದಲೇ ನೀವು ಪೂರ್ಣಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ


ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.


ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?


ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು.


ಈಗ ನನ್ನ ಮಗಳೇ, ನೀನು ಭಯಪಡಬೇಡ. ನಿನಗೆ ಬೇಕಾಗಿರುವುದನ್ನು ನಿನಗೆ ಮಾಡುವೆನು. ನೀನು ಗುಣವತಿಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರೂ ಬಲ್ಲರು.


“ಬಹುಮಂದಿ ಸ್ತ್ರೀಯರು ಗುಣವತಿಯರಾಗಿದ್ದಾರೆ. ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು,” ಎಂದು ಹೊಗಳುವನು.


ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.


ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಜ್ಞಾನಕ್ಕೆ ಸ್ವಯಂ ನಿಯಂತ್ರಣವನ್ನೂ ಸ್ವಯಂ ನಿಯಂತ್ರಣಕ್ಕೆ ತಾಳ್ಮೆಯನ್ನೂ


ಈ ಗುಣಗಳು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ, ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅರಿತುಕೊಳ್ಳುವುದರಲ್ಲಿ ನೀವು ನಿಷ್ಪ್ರಯೋಜಕರೂ ನಿಷ್ಫಲರೂ ಆಗದಂತೆ ಮಾಡುತ್ತವೆ.


ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನಹೊಂದಿ ಲೋಕದ ಮಾಲಿನ್ಯಗಳನ್ನು ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು