Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:11 - ಕನ್ನಡ ಸಮಕಾಲಿಕ ಅನುವಾದ

11 ಆದರೂ ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಸ್ವರ್ಗೀಯ ಜೀವಿಗಳ ವಿರೋಧವಾಗಿ ಕರ್ತದೇವರ ಮುಂದೆ ಇವರು ನ್ಯಾಯತೀರ್ಪನ್ನು ತರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ಕಳ್ಳಬೋಧಕರು ಉದ್ಧಟರು, ಸ್ವೇಚ್ಛಾಪರರು, ಸ್ವರ್ಗನಿವಾಸಿಗಳನ್ನು ದೂಷಿಸುವವರು. ದೇವದೂತರು ಶಕ್ತಿಯಲ್ಲಿ ಮತ್ತು ಪರಾಕ್ರಮದಲ್ಲಿ ಶ್ರೇಷ್ಠರಾಗಿದ್ದರೂ ಸಹ ಈ ಸ್ವರ್ಗನಿವಾಸಿಗಳನ್ನು ಪ್ರಭುವಿನ ಮುಂದೆ ದೂಷಿಸುವುದೂ ಇಲ್ಲ, ಖಂಡಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಮಹಾಪದವಿಯವರ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವದೂತರು ಈ ಸುಳ್ಳುಬೋಧಕರಿಗಿಂತ ಹೆಚ್ಚು ಬಲಿಷ್ಠರಾಗಿದ್ದಾರೆ ಮತ್ತು ಹೆಚ್ಚು ಶಕ್ತಿಯುಳ್ಳವರಾಗಿದ್ದಾರೆ. ಆದರೂ ದೇವದೂತರು ಸುಳ್ಳುಬೋಧಕರನ್ನು ಪ್ರಭುವಿನ ಸನ್ನಿಧಿಯಲ್ಲಿ ದೂಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್, ಹ್ಯಾ ಝುಟಿ ಶಿಕಾಪಾ ಶಿಕ್ವುತಲ್ಯಾಂಚ್ಯಾನ್ಕಿ ದೆವಾಚಿ ದುತಾ ಲೈ ಬಳಾಚೆ ಅನಿ ತಾಕ್ತಿಚೆ ಹೊವ್ನ್ ಹಾತ್, ಖರೆ ತೆನಿ ಹ್ಯಾ ಝುಟ್ಯಾ ಶಿಕಾಪಾಕಾರಾಕ್ನಿ ಧನಿಯಾಚ್ಯಾ ಇದ್ರಾಕ್ ಝಡ್ತಿ ಕರಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:11
6 ತಿಳಿವುಗಳ ಹೋಲಿಕೆ  

ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.


ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.


ಅವರು ಗಾಳಿಗಳನ್ನು ತಮ್ಮ ದೂತರಾಗಿ ಮಾಡಿದ್ದಾರೆ, ಅಗ್ನಿ ಜ್ವಾಲೆಯನ್ನು ತಮ್ಮ ಸೇವಕರಾಗಿಯೂ ಮಾಡಿಕೊಂಡಿದ್ದಾರೆ.


ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.


ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ.


ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು