Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:13 - ಕನ್ನಡ ಸಮಕಾಲಿಕ ಅನುವಾದ

13 ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯನ್ನು ಹಗಲಲ್ಲಿ ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಕಳಂಕಕ್ಕೂ, ನಿಂದೆಗೂ ಕಾರಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ ಅವಮಾನಕ್ಕೂ ಕಾರಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು. ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ತೆಂಚ್ಯಾ ವೈನಾ ಲೈ ಕಸ್ಟಾತ್ ಪಡ್ತಾತ್. ತೆನಿ ಕರ್ತಲ್ಯಾ ಚುಕೆಕ್ ತೆಂಕಾ ತೆಚ್ ದೆನೆ ಹೊವ್ನ್ ರ್‍ಹಾತಾ.ಝುಟಿ ಶಿಕಾಪಾಕಾರಿ ಲೊಕಾಂಚ್ಯಾ ಫಿಡ್ಯಾತ್ ಬುರ್ಶಿಕಾಮಾ ಕರುಕ್ ಖುಸಿ ಹೊತಾತ್.ಅಪ್ನಾಕ್ನಿ ಸಮಾಧಾನ ಕರ್ತಲ್ಯಾ ಬುರ್ಶಾ ಕಾಮಾನಿ ತೆನಿ ಆನಂದಿತ್ ಹೊತಾತ್ ತುಮಿ ಎಕಾಕ್ಡೆ ಗೊಳಾ ಹೊವ್ನ್ ಜೆವಾನ್ ಕರ್ತನಾ ತೆನಿ ತುಮ್ಕಾ ಅವಮಾನ್ ಸಾರ್ಕೆ ಹೊವ್ನ್ ಹಾತ್, ಅನಿ ತೆನಿ ತುಮ್ಚ್ಯಾ ಮದ್ದಿ ಬುರ್ಶಿ ಡಾಗಾ ಸಾರ್ಕೆ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:13
15 ತಿಳಿವುಗಳ ಹೋಲಿಕೆ  

ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.


ಆದುದರಿಂದ ನಿಮ್ಮ ಹಳೆಯ ಸ್ನೇಹಿತರೊಂದಿಗೆ ನೀವು ಮುಂಚಿನಂತೆ ಹಳೆಯ ದುಷ್ಕಾರ್ಯಗಳಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.


ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.


ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.


ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿ, ನಿನ್ನಲ್ಲಿ ದೋಷವೇನೂ ಇಲ್ಲ.


ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸಿಗೆ ಬಂದಂತೆ ಜೀವಿಸಿದ್ದೀರಿ. ವಧೆಯ ದಿವಸಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು