Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:14 - ಕನ್ನಡ ಸಮಕಾಲಿಕ ಅನುವಾದ

14 ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ವೆಭಿಚಾರಾನ್ ಭರಲ್ಲ್ಯಾ ಡೊಳ್ಯಾಂಚೆ ಹೊವ್ನ್ ಹಾತ್, ತೆನಿ ವಿಶ್ವಾಸ್ ನಸಲ್ಲೆ ಪಾಪಾಚ್ಯಾ ಪಾಸಿತ್ ಪಾಡ್ವುತಾತ್, ತೆನಿ ಅಪ್ನಾ ಮನಾಕ್ನಿ ಬರೆ ದಿಸ್ತಲೆಚ್ ಚಿಂತತಾತ್, ಅನಿ ಶಾಪಾಕ್ ಗುರಿ ಹೊಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:14
28 ತಿಳಿವುಗಳ ಹೋಲಿಕೆ  

ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.


ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ದೇವರ ಮೆಚ್ಚುಗೆ ನಿಮ್ಮಲ್ಲಿ ಯಾರ ಮೇಲೆ ಇದೆ ಎಂಬುದು ಕಂಡುಬರುವಂತೆ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.


ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?


ಅಂತಹ ವ್ಯಕ್ತಿ ಎರಡು ಮನಸ್ಸುಳ್ಳವನೂ ತನ್ನ ಮಾರ್ಗಗಳಲ್ಲೆಲ್ಲಾ ಚಂಚಲನೂ ಆಗಿದ್ದಾನೆ.


ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.


ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ನನ್ನ ಖಡ್ಗವು ಪರಲೋಕದಲ್ಲಿ ರೋಷಪಾನ ಮಾಡುವುದು. ಇಗೋ, ಅದು ಎದೋಮಿನ ಮತ್ತು ನಾನು ಶಪಿಸಿದ ಜನರ ಮೇಲೆಯೂ, ನ್ಯಾಯತೀರಿಸುವುದಕ್ಕಾಗಿ ಕೆಳಗೆ ಇಳಿದು ಬರುವುದು.


ನಿನ್ನ ಹೃದಯ ಅವಳ ಸೌಂದರ್ಯವನ್ನು ಮೋಹಿಸದಿರಲಿ. ಅವಳ ಕಣ್ಣುರೆಪ್ಪೆಗಳಿಂದ ಅವಳು ನಿನ್ನನ್ನು ವಶಮಾಡಿಕೊಳ್ಳದೆ ಇರಲಿ.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.


“ಅಲ್ಲಿ ಕೆಲವು ದಿನಗಳು ಮಾತ್ರ ಬದುಕತಕ್ಕ ಕೂಸೂ, ವೃದ್ಧನೂ ಇರುವುದಿಲ್ಲ. ಮಗುವು ನೂರು ವರುಷದವನಾಗಿ ಸಾಯುವುದು. ಆದರೆ ನೂರು ವರುಷವನ್ನು ತಲುಪಲು ವಿಫಲನಾದವನನ್ನು ಶಾಪಗ್ರಸ್ತ ಎಂದು ಪರಿಗಣಿಸಲಾಗುತ್ತದೆ.


“ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.


“ನನ್ನ ಹೃದಯವು ಪರಸ್ತ್ರೀಗೆ ಮರುಳಾಗಿ, ನನ್ನ ನೆರೆಯವನ ಬಾಗಿಲ ಹತ್ತಿರ ನಾನು ಹೊಂಚುಹಾಕಿದ್ದರೆ,


ನಾನು ದಾರಿತಪ್ಪಿ ನಡೆದಿದ್ದರೆ, ನನ್ನ ಕಣ್ಣು ಕಂಡವುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಅಂಟಿಕೊಂಡಿದ್ದರೆ,


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಜೀವಮಾರ್ಗದ ವಿಚಾರ ಅವಳಿಗಿಲ್ಲ; ಆದ್ದರಿಂದ ಅವಳ ಮಾರ್ಗಗಳು ಚಂಚಲವಾಗಿವೆ, ಅದರ ಅರಿವೂ ಅವಳಿಗಿಲ್ಲ.


ಹೀಗೆ ಹೇಳು ಎಂದು, ‘ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡುಗಳನ್ನು ಹೊಲೆದು ಮತ್ತು ಪ್ರತಿಯೊಬ್ಬನ ಎತ್ತರದ ತಲೆಗಳಿಗೆ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಪುತ್ರಿಯರಿಗೆ ಕಷ್ಟ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ. ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ. ಆದ್ದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು