Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:9 - ಕನ್ನಡ ಸಮಕಾಲಿಕ ಅನುವಾದ

9 ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಧನಿ ದೆವ್ ಅಪ್ಲ್ಯಾ ಲೊಕಾಕ್ನಿ ತರಾಸಾತ್ನಾ ರಾಕ್ವನ್ ಕರ್ತಲೊ ಹೊವ್ನ್ ಹಾಯ್ ,ಅನಿ ತೊ ಬುರ್ಶಾ ಲೊಕಾಕ್ನಿ ಝಡ್ತಿ ಕರ್ತಲೊ ಎಳ್ ಯೆಯ್ ಪತರ್ ತೆಂಕಾ ಶಿಕ್ಷಾ ದಿವ್ನ್ಗೆತ್ ರ್‍ಹಾತಾ ಮನ್ತಲೆ ಖರೆಚ್ ಹಾಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:9
22 ತಿಳಿವುಗಳ ಹೋಲಿಕೆ  

ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.


ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು.


ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.


ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.


ದೇವರು ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವರು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಯೆಹೋವ ದೇವರು ತಮ್ಮ ನಂಬಿಗಸ್ತರನ್ನು ತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ; ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು.


ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ.


ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.


ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ; ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ.


ಆದರೆ ಯೆಹೋವ ದೇವರು ಅವನನ್ನು ದುಷ್ಟನ ಕೈಯಲ್ಲಿ ಬಿಡುವುದಿಲ್ಲ; ನ್ಯಾಯ ವಿಚಾರಣೆಯಲ್ಲಿ ನೀತಿವಂತನನ್ನು ಅಪರಾಧಿಯೆಂದು ತೀರ್ಪು ಕೊಡುವುದಿಲ್ಲ.


ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು, ಆದರೆ ನೀತಿವಂತರು ಇಕ್ಕಟ್ಟಿನೊಳಗಿಂದ ತಪ್ಪಿಸಿಕೊಳ್ಳುವರು.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.


ಆದ್ದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ಯಜಮಾನನ ಸೇವಕರನ್ನು ಕರಕೊಂಡು, ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು