Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:11 - ಕನ್ನಡ ಸಮಕಾಲಿಕ ಅನುವಾದ

11 ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11-12 ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದರಿಂದ ನೀವು ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಹಾರೈಸುತ್ತಾ ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕಲ್ಲಾ; ಆ ದಿನದಲ್ಲಿ ಆಕಾಶಮಂಡಲವು ಬೆಂಕಿ ಹತ್ತಿ ಲಯವಾಗಿ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಕರಗಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ನಿಮಗೆ ಹೇಳಿದಂತಹ ರೀತಿಯಲ್ಲಿಯೇ ಎಲ್ಲವೂ ನಾಶಗೊಳ್ಳುತ್ತವೆ. ಆದ್ದರಿಂದ ನೀವು ಎಂತಹ ಜನರಾಗಿರಬೇಕು? ನೀವು ಪರಿಶುದ್ಧರಾಗಿರಬೇಕು ಮತ್ತು ಭಕ್ತಿವುಳ್ಳವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಸಗ್ಳ್ಯೆ ಅಸೆ ನಾಶ್ ಹೊವ್ನ್ ಜಾತಲೆ ಹಾಯ್, ತೆಚ್ಯಾ ಸಾಟ್ನಿ ತೆನಿ ಬರೊ ಪವಿತ್ರ್ ಜಿವನ್ ಕರುಕ್ ಪಾಜೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:11
27 ತಿಳಿವುಗಳ ಹೋಲಿಕೆ  

ಆದರೆ ನಿಮ್ಮನ್ನು ಕರೆದಿರುವ ದೇವರು ಪರಿಶುದ್ಧರಾಗಿರುವ ಪ್ರಕಾರವೇ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿಹತ್ತಿ ಲಯವಾಗಿ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ.


ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.


ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.


ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.


ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.


ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶುದ್ಧವಾದ ಮಾತುಗಳಿಗೂ ಭಕ್ತಿಗೆ ಅನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ,


ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.


ಆದರೆ ಶಿಷ್ಯರು ಆಶ್ಚರ್ಯದಿಂದ, “ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದರು.


ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ.


ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”


ಏಕೆಂದರೆ ಇವನು ತನ್ನನ್ನು ಕನ್ನಡಿಯಲ್ಲಿ ನೋಡಿಕೊಂಡು ಹೋಗಿದ್ದರೂ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.


ಸಂತೃಪ್ತಿಯೊಂದಿಗಿರುವ ದೇವಭಕ್ತಿಯೇ ದೊಡ್ಡ ಲಾಭವು.


ಭೂಮಿಯು ಬಿರುಕುಬಿಟ್ಟಿದೆ, ಬಿರಿದು ಬಿರಿದಿದೆ, ಭೂಮಿಯು ಕದಲಿಹೋಗಿದೆ.


ಜ್ಞಾನಕ್ಕೆ ಸ್ವಯಂ ನಿಯಂತ್ರಣವನ್ನೂ ಸ್ವಯಂ ನಿಯಂತ್ರಣಕ್ಕೆ ತಾಳ್ಮೆಯನ್ನೂ


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ದುಷ್ಟರು ಬಡವನನ್ನೂ ದೀನನನ್ನೂ ಬೀಳಿಸಬೇಕೆಂದು ಖಡ್ಗವನ್ನು ಹಿರಿದಿದ್ದಾರೆ, ಸನ್ಮಾರ್ಗದವರನ್ನು ಕೊಲ್ಲುವುದಕ್ಕೂ ತಮ್ಮ ಬಿಲ್ಲುಗಳನ್ನು ಬಗ್ಗಿಸಿದ್ದಾರೆ.


ಈಗಿನ ಕಾಲವನ್ನು ತಿಳಿದು ಇದನ್ನೆಲ್ಲಾ ಮಾಡಿರಿ. ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಗಳಿಗೆಯಾಗಿದೆ. ಏಕೆಂದರೆ, ನಮ್ಮ ರಕ್ಷಣೆಯು ನಾವು ಮೊದಲು ವಿಶ್ವಾಸವಿಟ್ಟಿದಕ್ಕಿಂತ ಈಗ ಹತ್ತಿರವಾಗಿರುತ್ತದೆ.


ರಾತ್ರಿಯು ಬಹಳಷ್ಟು ಕಳೆದು ಹಗಲು ಸಮೀಪಿಸಿದೆ. ಆದ್ದರಿಂದ ನಾವು ಕತ್ತಲೆಯ ಕೃತ್ಯಗಳನ್ನು ಎಸೆದು ಬೆಳಕಿನ ಆಯುಧಗಳನ್ನು ಧರಿಸಿಕೊಳ್ಳೋಣ.


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು