Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:16 - ಕನ್ನಡ ಸಮಕಾಲಿಕ ಅನುವಾದ

16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಬರೆಯುವಾಗ ಹೀಗೆ ಬೋಧಿಸಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ಮಾತುಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಹೇಗೆ ನಮಗಿರುವ ವಿುಕ್ಕಾದ ಗ್ರಂಥಗಳಿಗೆ ತಪ್ಪಾದ ಅರ್ಥಮಾಡಿಕೊಂಡಿದ್ದಾರೋ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಪ್ನಾಚ್ಯಾ ಸಗ್ಳ್ಯಾ ಚಿಟಿಯಾತ್ನಿ ಹ್ಯಾ ಸಂಗ್ತಿಯಾಚ್ಯಾ ವಿಶಯಾತ್ ಬೊಲ್ತಾನಾ ತೆನಿ ಹೆಚ್ ಶಿಕ್ವಲ್ಲೆ ಹಾಯ್, ಸಮ್ಜುನ್ ಘೆವ್ಕ್ ಕಸ್ಟ್ ಹೊತಲ್ಯಾ ಉಲ್ಯ್ಲಾ ಸಂಗ್ತಿಯಾ ಹೆಚ್ಯಾ ಚಿಟಿಯಾತ್ನಿ ಹಾತ್. ಬುದ್ದ್ ನಸಲ್ಲಿ ಅನಿ ಚಂಚಲ್ ಮಾನಾಚಿ ಲೊಕಾ ಹೆಚೊ ಅರ್ಥ್ ದುಸ್ರೊಚ್ ಕಾಡ್ತಾತ್ ಅನಿ ಅಪ್ನಾಚ್ಯಾ ನಾಶಾಕ್ ಕಾರನ್ ಹೊತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:16
26 ತಿಳಿವುಗಳ ಹೋಲಿಕೆ  

‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.


ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ನೀವು ಗ್ರಹಿಸ ಬಯಸದಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.


ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.


ಅಂತಹ ವ್ಯಕ್ತಿ ಎರಡು ಮನಸ್ಸುಳ್ಳವನೂ ತನ್ನ ಮಾರ್ಗಗಳಲ್ಲೆಲ್ಲಾ ಚಂಚಲನೂ ಆಗಿದ್ದಾನೆ.


ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.


ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.


ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ.


ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.


ಶತ್ರುಗಳು ನನ್ನ ಮಾತುಗಳನ್ನು ಸದಾ ಅಪಾರ್ಥ ಮಾಡಿಕೊಳ್ಳುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ಕೇಡಿಗಾಗಿವೆ.


ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ನೀವು ದೇವರ ಆಜ್ಞೆಯನ್ನು ಏಕೆ ಮೀರುತ್ತೀರಿ?


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನ್ಯ ಇವುಗಳಲ್ಲೆಲ್ಲಾ ಚದರಿರುವ, ದೇವರಿಂದ ಆಯ್ಕೆಯಾದ ಪ್ರವಾಸಿಗಳಿಗೆ,


ಶೆಬದ ರಾಣಿಯು ಯೆಹೋವ ದೇವರ ನಾಮದ ಮಹತ್ತಿನಿಂದ ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು.


ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


“ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ತಪ್ಪಿಸಿ ತೀರ್ಪುಕೊಡಬಾರದು.


“ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.


ನೀರಿನಂತೆ ಚಂಚಲನಾಗಿದ್ದು, ನೀನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆಮಾಡಿದೆ, ನನ್ನ ಹಾಸಿಗೆಯನ್ನು ಏರಿದೆ.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ನಮಗೆ ಕರ್ತ ಹಾಗೂ ರಕ್ಷಕ ಆಗಿರುವವರು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುತ್ತೇನೆ.


ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು