Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:1 - ಕನ್ನಡ ಸಮಕಾಲಿಕ ಅನುವಾದ

1 ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1-2 ಸಭೆಯ ಹಿರಿಯನು ದೇವರಾದುಕೊಂಡವರಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಬರೆಯುವದೇನಂದರೆ - ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲವೂ ನಮ್ಮೊಂದಿಗಿರುವಂಥ ಸತ್ಯದ ನಿವಿುತ್ತ ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಭಾಹಿರಿಯನು, ದೇವರಿಂದ ಆಯ್ಕೆಯಾದ ಅಮ್ಮನವರಿಗೆ ಮತ್ತು ಆಕೆಯ ಮಕ್ಕಳಿಗೆ ಬರೆಯುವ ಪತ್ರ. ನಾನು ನಿಮ್ಮೆಲ್ಲರನ್ನು ಸತ್ಯದಲ್ಲಿ ಪ್ರೀತಿಸುತ್ತೇನೆ. ಸತ್ಯವನ್ನು ತಿಳಿದಿರುವ ಜನರೆಲ್ಲರೂ ಸಹ ನಿಮ್ಮನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜಾನ್ತ್ಯಾನ್, ಪ್ರಿತಿಚ್ಯಾ ಬಾಯಿಕ್ ಅನಿ ತಿಚ್ಯಾ ಪೊರಾಕ್ನಿ ಲಿವ್ತಲಿ ಚಿಟ್, ಮಿಯಾ ತುಮ್ಚೊ ಪ್ರೆಮ್ ಕರ್ತಾ ಅನಿ ಮಿಯಾ ಎಕ್ಲೊಚ್ ನ್ಹಯ್, ಖರೆಪಾನ್ ಗೊತ್ತ್ ಹೊತ್ತಿ, ಎಚುನ್ ಹೊಲ್ಲೆ ಸಗ್ಳೆ ಜಾನಾ ತುಮ್ಚೊ ಪ್ರೆಮ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:1
25 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.


ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.


ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.


ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿನಗೆ ಬರೆಯುವವನಾಗಿ ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ದೇವರಿಂದ ಆಯ್ಕೆಯಾದ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ.


ನೀವು ಸತ್ಯವನ್ನು ತಿಳಿಯದವರೆಂದು ನಾನು ಭಾವಿಸುತ್ತಿಲ್ಲ, ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಬರುವುದಿಲ್ಲ ಎಂಬುವುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಏಕೆಂದರೆ, ನಾವು ಸತ್ಯದ ಅರಿವನ್ನು ಹೊಂದಿದ ಮೇಲೆ ಬೇಕೆಂದು ಪಾಪ ಮಾಡುತ್ತಾ ಇದ್ದರೆ, ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.


ನೀವು ಚೆನ್ನಾಗಿ ಓಡುತ್ತಿದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ತಡೆದವರು ಯಾರು?


ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ?


ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.


ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ.


ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು.


ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.


ಕರ್ತನಲ್ಲಿ ಆಯ್ಕೆಯಾಗಿರುವ ರೂಫನಿಗೂ ನನಗೂ ತಾಯಿಯಂತಿದ್ದ ಅವನ ತಾಯಿಗೂ ವಂದನೆಗಳು.


ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆ ಹೇಳುತ್ತಾನೆ.


ಹಿರಿಯನು, ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ ಬರೆಯುವುದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು