Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:9 - ಕನ್ನಡ ಸಮಕಾಲಿಕ ಅನುವಾದ

9 “ಅವನು ನನಗೆ, ‘ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು. ಏಕೆಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣವಾಗಿರುವುದರಿಂದ ಸಂಕಟವು ನನ್ನನ್ನು ಹಿಡಿದಿದೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಅವನು ನನಗೆ, ‘ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದದೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಅವರು, “ನೀನು ಮನಸ್ಸುಮಾಡಿ ಹತ್ತಿರ ಬಂದು ನನ್ನನ್ನು ಕೊಂದುಹಾಕು; ಏಕೆಂದರೆ, ನನ್ನಲ್ಲಿ ಇನ್ನೂ ಪೂರ್ಣಶಕ್ತಿಯಿದ್ದರೂ ಪ್ರಾಣಸಂಕಟಕ್ಕೆ ಸಿಕ್ಕಿಕೊಂಡಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಅವನು ನನಗೆ - ನೀನು ಕೃಪೆಮಾಡಿ ಹತ್ತಿರ ಬಂದು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವದರಿಂದ ನನಗೆ ಸಂಕಟ ಹಿಡಿದದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೌಲನು ನನಗೆ, ‘ದಯವಿಟ್ಟು ನನ್ನನ್ನು ಕೊಂದುಬಿಡು. ನಾನು ಬಹು ಸಂಕಟದಲ್ಲಿದ್ದೇನೆ. ನಾನು ಈಗಾಗಲೇ ಸತ್ತವನಂತಿದ್ದೇನೆ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:9
6 ತಿಳಿವುಗಳ ಹೋಲಿಕೆ  

“ಆಗ ಅವನು, ‘ನೀನ್ಯಾರು?’ ಎಂದು ಕೇಳಿದನು. “ ‘ನಾನು ಒಬ್ಬ ಅಮಾಲೇಕ್ಯನು,’ ಎಂದು ಉತ್ತರಕೊಟ್ಟೆನು.


“ಆದ್ದರಿಂದ ಅವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು, ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು, ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದಿದ್ದೇನೆ,” ಎಂದನು.


ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.


ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.


ಆಗ ಸೌಲನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ, ನೀನು ನಿನ್ನ ಖಡ್ಗವನ್ನು ಹಿರಿದು ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.


ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು