Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:14 - ಕನ್ನಡ ಸಮಕಾಲಿಕ ಅನುವಾದ

14 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರು ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು, ಯೆರೂಸಲೇಮಿಗೆ ತಿರುಗಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು ಜೆರುಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವರು ಓಡಿಹೋಗುವದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವದನ್ನು ಬಿಟ್ಟು ಯೆರೂಸಲೇವಿುಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅರಾಮ್ಯರು ಓಡಿಹೋಗುತ್ತಿರುವುದನ್ನು ನೋಡಿದ ಅಮ್ಮೋನಿಯರು ಅಬೀಷೈಯನ್ನು ಬಿಟ್ಟು ಓಡಿಹೋದರು. ಅವರು ತಮ್ಮ ನಗರಕ್ಕೆ ಹಿಂದಿರುಗಿದರು. ಯೋವಾಬನು ಯುದ್ಧರಂಗದಿಂದ ಹಿಂದಿರುಗಿ ಜೆರುಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:14
7 ತಿಳಿವುಗಳ ಹೋಲಿಕೆ  

ಅಂದರೆ, ಅರಾಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಮತ್ತು ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಿಂದ ಪಡೆದ ಕೊಳ್ಳೆಯನ್ನೂ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.


ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರೆಲ್ಲರು ಒಟ್ಟಾಗಿ ಕೂಡಿಬಂದರು.


ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.


ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.


ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು.


“ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು. ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ.


ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು