Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:6 - ಕನ್ನಡ ಸಮಕಾಲಿಕ ಅನುವಾದ

6 ಆಗ ದಾವೀದನು, “ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸು,” ಎಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಡನೆ ದಾವೀದನು ದೂತರ ಮುಖಾಂತರ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು,” ಎಂದು ಆಜ್ಞಾಪಿಸಿದನು. ಅವನು ಅಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಡನೆ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ - ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು ಎಂದು ಆಜ್ಞಾಪಿಸಿದನು. ಅವನು ಊರೀಯನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂಬ ಸಂದೇಶವನ್ನು ಕಳುಹಿಸಿದನು. ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:6
12 ತಿಳಿವುಗಳ ಹೋಲಿಕೆ  

ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ಅದಕ್ಕೆ ಅವನು, “ಆ ಮನುಷ್ಯನನ್ನು ನಾನು ಅರಿಯೆನು,” ಎಂದು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಪ್ರಾರಂಭಿಸಿದನು. ಕೂಡಲೇ ಹುಂಜ ಕೂಗಿತು.


ಆಗ ಅವನು ಆಣೆ ಮಾಡಿ, “ನಾನು ಆ ಮನುಷ್ಯನನ್ನು ಅರಿಯೆನು,” ಎಂದು ತಿರುಗಿ ನಿರಾಕರಿಸಿದನು.


ಆದರೆ ಅವನು ಎಲ್ಲರ ಮುಂದೆ, “ನೀನು ಏನು ಹೇಳುತ್ತೀಯೋ ನನಗೆ ತಿಳಿಯದು,” ಎಂದು ನಿರಾಕರಿಸಿದನು.


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಅದಕ್ಕವನು, “ನಾನು ಪಾಪವನ್ನು ಮಾಡಿದೆನು. ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ, ಇಸ್ರಾಯೇಲರ ಮುಂದೆಯೂ ನನ್ನನ್ನು ಘನಪಡಿಸು. ನಾನು ನಿನ್ನ ದೇವರಾದ ಯೆಹೋವ ದೇವರಿಗೆ ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ,” ಎಂದನು.


ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.


ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ, “ತಾನು ಗರ್ಭವತಿ,” ಎಂಬ ವಿಷಯವನ್ನು ದಾವೀದನಿಗೆ ಹೇಳಿ ಕಳುಹಿಸಿದಳು.


ಊರೀಯನು ದಾವೀದನ ಬಳಿಗೆ ಬಂದಾಗ, ದಾವೀದನು ಅವನನ್ನು, “ಯೋವಾಬನೂ ಸೈನ್ಯದವರೂ ಹೇಗಿದ್ದಾರೆ? ಮತ್ತು ಯುದ್ಧವು ಹೇಗಿದೆ?” ಎಂದು ವಿಚಾರಿಸಿದನು.


ಹಿತ್ತಿಯನಾದ ಊರೀಯನು. ಹೀಗೆ ಇವರು ಸೇರಿ ಒಟ್ಟು ಮೂವತ್ತೇಳು ಮಂದಿ ರಣಧೀರರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು