Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:8 - ಕನ್ನಡ ಸಮಕಾಲಿಕ ಅನುವಾದ

8 ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಅವನಿಗೆ, “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮನೆಗೆ ಹೋಗಿ ಕೈಕಾಲು ತೊಳೆದುಕೋ ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ದಾವೀದನು ಊರೀಯನಿಗೆ, “ಮನೆಗೆ ಹೋಗಿ ವಿಶ್ರಾಂತಿಯನ್ನು ಪಡೆ” ಎಂದನು. ಊರೀಯನು ರಾಜನ ಮನೆಯನ್ನು ಬಿಟ್ಟುಹೋದನು. ಊರೀಯನಿಗೆ ರಾಜನು ಕೊಡುಗೆಗಳನ್ನು ಸಹ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:8
11 ತಿಳಿವುಗಳ ಹೋಲಿಕೆ  

ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ, ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ, ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.


ತರುವಾಯ ಯೇಸು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನನಿಗೆ, “ಈ ಸ್ತ್ರೀಯನ್ನು ಕಂಡಿದ್ದೀಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ. ಇವಳಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತನ್ನ ತಲೆಕೂದಲಿನಿಂದ ಅವುಗಳನ್ನು ಒರೆಸಿದ್ದಾಳೆ.


ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ, ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು? ಎಂದುಕೊಂಡು, ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸುವವರಿಗೆ ಕಷ್ಟ!


ಅವನ ಬಾಯಿಯ ಮಾತುಗಳು ಬೆಣ್ಣೆಗಿಂತ ನುಣ್ಣಗಾಗಿವೆ; ಆದರೆ ಅವನ ಹೃದಯದಲ್ಲಿ ಕಾಳಗವಿದೆ; ಅವನ ಮಾತುಗಳು ಎಣ್ಣೆಗಿಂತ ನಯವಾಗಿವೆ; ಆದರೆ ಅವು ಬಿಚ್ಚುಗತ್ತಿಗಳಾಗಿವೆ.


ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.


ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.


ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು ಮತ್ತು ಅವರು ಅವನ ಸಂಗಡ ಕುಡಿದು ಸಂತೋಷದಿಂದಿದ್ದರು.


ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ, ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.


“ಸ್ವಾಮಿಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ತಂಗಿ, ರಾತ್ರಿ ಕಳೆಯಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ. ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ಹಾಗಲ್ಲ, ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು