Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:13 - ಕನ್ನಡ ಸಮಕಾಲಿಕ ಅನುವಾದ

13 ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:13
46 ತಿಳಿವುಗಳ ಹೋಲಿಕೆ  

ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.


ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.


ಆಗ ದೇವದೂತನು ತನ್ನ ಮುಂದೆ ನಿಂತವರಿಗೆ, “ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದುಹಾಕಿರಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ಪಾಪವನ್ನು ತೆಗೆದುಹಾಕಿದ್ದೇನೆ. ಬದಲಾಗಿ ಶ್ರೇಷ್ಠ ವಸ್ತ್ರಗಳನ್ನು ನಿನಗೆ ತೊಡಿಸುವೆನು,” ಎಂದನು.


“ಆದರೂ ಮಗನು ತಂದೆಗೆ, ‘ಅಪ್ಪಾ, ನಾನು ಪರಲೋಕಕ್ಕೆ ವಿರೋಧವಾಗಿಯೂ ನಿಮ್ಮ ಮುಂದೆಯೂ ಪಾಪಮಾಡಿದ್ದೇನೆ. ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಯಿಸಿಕೊಳ್ಳಲು ಯೋಗ್ಯನಲ್ಲ,’ ಎಂದನು.


ಅದಕ್ಕವನು, “ನಾನು ಪಾಪವನ್ನು ಮಾಡಿದೆನು. ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ, ಇಸ್ರಾಯೇಲರ ಮುಂದೆಯೂ ನನ್ನನ್ನು ಘನಪಡಿಸು. ನಾನು ನಿನ್ನ ದೇವರಾದ ಯೆಹೋವ ದೇವರಿಗೆ ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ,” ಎಂದನು.


“ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.


ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿದ್ದ ಯೋಹಾನನ ತಲೆಯನ್ನು ಕಡಿಸಿದನು.


ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.


ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ. ನನ್ನ ಕಡೆಗೆ ತಿರುಗಿಕೋ. ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ.”


ನೀನು ನನಗೋಸ್ಕರ ಹಣದಿಂದ ಪರಿಮಳ ತೈಲವನ್ನು ಕೊಂಡುಕೊಳ್ಳಲಿಲ್ಲ. ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ಅಕ್ರಮಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.


ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.


ಯಜ್ಞವನ್ನು ನೀವು ಇಷ್ಟಪಡುವುದಿಲ್ಲ, ಇಲ್ಲವಾದರೆ ನಾನು ಅದನ್ನು ತರುತ್ತಿದ್ದೆನು. ದಹನಬಲಿಗಳಲ್ಲಿ ನೀವು ಸಂತೋಷಪಡುವುದಿಲ್ಲ.


ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. ದೇವರು ಮುಯ್ಯಿತೀರಿಸಲಿಲ್ಲ,


ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.


ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.


ಆಗ ಅರಸನು ಒಬ್ಬ ಪ್ರಧಾನನನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಎಲೀಯನ ಬಳಿಗೆ ಕಳುಹಿಸಿದನು. ಪ್ರಧಾನನು ಅವನ ಬಳಿಗೆ ಹೋದಾಗ, ಇಗೋ, ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆಗ ಅವನು ಎಲೀಯನಿಗೆ, “ದೇವರ ಮನುಷ್ಯನೇ, ‘ಇಳಿದು ಬಾ,’ ಎಂದು ಅರಸನು ಹೇಳುತ್ತಾನೆ,” ಎಂದನು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,


ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಹೇಳಿದ ಮಾತನ್ನು ಕೇಳಿದಾಗ, ಅವನು ಪೀಠದ ಬಳಿಯಿಂದ ತನ್ನ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳೆದುಕೊಳ್ಳದ ಹಾಗೆ ಒಣಗಿ ಹೋಯಿತು.


ಆಗ ಸೌಲನು ಸಮುಯೇಲನಿಗೆ, “ಹೌದು, ನಾನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ಯೆಹೋವ ದೇವರು ನನ್ನನ್ನು ಕಳುಹಿಸಿದ ಮಾರ್ಗವಾಗಿ ಹೋಗಿ, ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು, ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.


“ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.


“ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.


ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.


ದಾವೀದನು ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ, ಮಹಾಪಾಪ ಮಾಡಿದೆನು. ನೀವು ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ. ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ, ಅವರು ನಮ್ಮ ಅತಿಕ್ರಮಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾರೆ.


ಆಗ ಫರೋಹನು ಮೋಶೆ ಆರೋನರನ್ನು ಕರೆಕಳುಹಿಸಿ ಅವರಿಗೆ, “ಈ ಸಲ ನಾನು ಪಾಪಮಾಡಿದ್ದೇನೆ, ಯೆಹೋವ ದೇವರು ನೀತಿವಂತನು. ಆದರೆ ನಾನೂ, ನನ್ನ ಜನರೂ ತಪ್ಪಿತಸ್ಥರು.


ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.


ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು