Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:20 - ಕನ್ನಡ ಸಮಕಾಲಿಕ ಅನುವಾದ

20 ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ, ತೈಲವನ್ನು ಹಚ್ಚಿಕೊಂಡವನಾಗಿ, ಬದಲು ವಸ್ತ್ರಗಳನ್ನು ಧರಿಸಿಕೊಂಡು, ಯೆಹೋವ ದೇವರ ಮನೆಗೆ ಹೋಗಿ, ಅವರನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನ ಕೋರಿಕೆಯ ಮೇರೆಗೆ ಅವರು ಅವನಿಗೆ ಆಹಾರವನ್ನು ಬಡಿಸಿದರು ಮತ್ತು ಅವನು ತಿನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಸರ್ವೇಶ್ವರನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ದಾವೀದನು ನೆಲದಿಂದೆದ್ದು ಸ್ನಾನಮಾಡಿ ತೈಲ ಹಚ್ಚಿಕೊಂಡು ತನ್ನ ಬಟ್ಟೆಗಳನ್ನು ಬದಲಿಸಿ ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರತರಿಸಿ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ದಾವೀದನು ನೆಲದಿಂದ ಮೇಲಕ್ಕೆದ್ದನು. ಅವನು ತನ್ನನ್ನು ಶುಚಿಗೊಳಿಸಿಕೊಂಡನು. ಅವನು ತನ್ನ ಬಟ್ಟೆಗಳನ್ನು ಬದಲಿಸಿ ಬೇರೆ ಬಟ್ಟೆಗಳನ್ನು ಧರಿಸಿದನು. ನಂತರ ಅವನು ಯೆಹೋವನನ್ನು ಆರಾಧಿಸುವುದಕ್ಕಾಗಿ ಆತನ ಆಲಯಕ್ಕೆ ಹೋದನು. ಅವನು ಮನೆಗೆ ಹೋಗಿ ತಿನ್ನಲು ಏನನ್ನಾದರೂ ಕೊಡುವಂತೆ ಕೇಳಿದನು. ಅವನ ಸೇವಕರು ಕೊಟ್ಟ ಸ್ವಲ್ಪ ಆಹಾರವನ್ನು ಅವನು ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:20
20 ತಿಳಿವುಗಳ ಹೋಲಿಕೆ  

ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,


ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ಒಳ್ಳೆಯ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ತಿಂದು ಕುಡಿದು ತೀರಿಸುವವರೆಗೂ ಅವನಿಗೆ ನೀನು ಅಲ್ಲಿರುವದು ಅವನಿಗೆ ತಿಳಿಯದಿರಲಿ.


ಆದರೆ ನೀನು ಉಪವಾಸ ಮಾಡುವಾಗ, ತಲೆಗೆ ಎಣ್ಣೆ ಹಚ್ಚಿಕೊಂಡು, ಮುಖ ತೊಳೆದುಕೋ.


ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ, ನಿನ್ನ ತಲೆಗೆ ಯಾವಾಗಲೂ ಎಣ್ಣೆ ಹಚ್ಚಿರಲಿ.


ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.


ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ಸಾರ್ವಭೌಮ ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?


ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ; ಇದನ್ನು ಮಾಡಿದವರು ನೀವೇ.


ಅವರು ಯೆಹೋವ ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ದಾವೀದನು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು.


ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ, ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿದ್ದಾಳೆ.


ಆದರೆ ದಾವೀದನು ತನ್ನ ಸೇವಕರು ಪಿಸುಗುಟ್ಟುವುದನ್ನು ಕಂಡು, ಮಗು ಸತ್ತು ಹೋಯಿತೆಂದು ಗ್ರಹಿಸಿಕೊಂಡನು. ದಾವೀದನು ತನ್ನ ಸೇವಕರಿಗೆ, “ಮಗುವು ಸತ್ತು ಹೋಯಿತೋ?” ಎಂದನು. ಅವರು, “ಸತ್ತು ಹೋಯಿತು,” ಎಂದರು.


ಅವನ ಸೇವಕರು ಅವನಿಗೆ, “ಇದು ಏನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ, ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದೆ. ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದೆ,” ಎಂದರು.


ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು,


ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.


ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.


ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ನನ್ನ ಅಂತರಾತ್ಮವೇ ಅವರ ಪರಿಶುದ್ಧ ನಾಮವನ್ನು ಸ್ತುತಿಸು.


ಯೆಹೋವ ದೇವರು, ಅನುಕಂಪವೂ ದಯೆಯೂ ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ.


ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.


ಆದ್ದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ, ನಾನು ಯೆಹೋವ ದೇವರನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರುಗಿ ಬಾ,” ಎಂದು ಬೇಡಿಕೊಂಡನು.


ಹಾಗೆಯೇ ಸಮುಯೇಲನು ತಿರುಗಿ ಸೌಲನ ಹಿಂದೆ ಹೋದನು. ಸೌಲನು ಯೆಹೋವ ದೇವರನ್ನು ಆರಾಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು