Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:22 - ಕನ್ನಡ ಸಮಕಾಲಿಕ ಅನುವಾದ

22 ಅದಕ್ಕವನು, “ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಯೆಹೋವ ದೇವರು ನನಗೆ ದಯಮಾಡುವರೋ ಎಂದು ಉಪವಾಸ ಮಾಡಿ ಅತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದಾವೀದನು ಅವರಿಗೆ, “ಹುಡುಗ ಜೀವದಿಂದಿದ್ದಾಗ ಒಂದು ವೇಳೆ ಸರ್ವೇಶ್ವರ ಕೃಪೆಮಾಡಿ ಅವನನ್ನು ಉಳಿಸಾರು ಎಂದುಕೊಂಡು ಉಪವಾಸ ಮಾಡಿದೆ, ಕಣ್ಣೀರಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದಾವೀದನು ಅವರಿಗೆ - ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸಮಾಡಿದೆನು, ಅತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದಾವೀದನು, “ಮಗು ಜೀವದಿಂದ ಇರುವಾಗ ನಾನು ಊಟಮಾಡದೆ ಗೋಳಾಡಿದೆ, ಏಕೆಂದರೆ ‘ಒಂದುವೇಳೆ ಯೆಹೋವನು ನನ್ನ ಬಗ್ಗೆ ಅನುಕಂಪವನ್ನು ತೋರಿ ಮಗುವನ್ನು ಬದುಕಿಸಬಹುದು’ ಎಂದು ನಾನು ಯೋಚಿಸಿಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:22
10 ತಿಳಿವುಗಳ ಹೋಲಿಕೆ  

“ನೀನು ಹೋಗಿ ಹಿಜ್ಕೀಯನಿಗೆ ಹೀಗೆ ಹೇಳು, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ.


ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು.


ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?


ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


ಅವನ ಸೇವಕರು ಅವನಿಗೆ, “ಇದು ಏನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ, ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದೆ. ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದೆ,” ಎಂದರು.


“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು