Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:9 - ಕನ್ನಡ ಸಮಕಾಲಿಕ ಅನುವಾದ

9 ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:9
23 ತಿಳಿವುಗಳ ಹೋಲಿಕೆ  

ಹೀಗಿರುವಾಗ ನೀನು ಏಕೆ ಯೆಹೋವ ದೇವರ ಮಾತಿಗೆ ವಿಧೇಯನಾಗದೆ, ಕೊಳ್ಳೆಯ ಮೇಲೆ ಬಿದ್ದು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ?” ಎಂದನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.


ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ, ನಾನು ಅದಕ್ಕೆ ಉಪಕಾರ ಮಾಡುತ್ತೇನೆಂದು ಹೇಳಿದ ಒಳ್ಳೆಯದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.


ನಮ್ಮ ಅಕ್ರಮಗಳನ್ನು ನಿಮ್ಮ ಮುಂದೆ ಇಟ್ಟಿದ್ದೀರಿ. ನಾವು ಮುಚ್ಚಿಟ್ಟುಕೊಂಡಿರುವ ಪಾಪಗಳು ನಿಮ್ಮ ಸನ್ನಿಧಿಯಲ್ಲಿವೆ.


ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”


ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.


ಆಗ ದಾವೀದನು ದೂತರನ್ನು ಕಳುಹಿಸಿ ಅವಳನ್ನು ಬರಮಾಡಿಕೊಂಡನು. ಅವಳು ಅವನ ಬಳಿಗೆ ಬಂದಾಗ, ಅವಳು ತನ್ನ ಮೈಲಿಗೆಯನ್ನು ಕಳೆದುಕೊಂಡು ಶುಚಿಯಾಗಿದ್ದದರಿಂದ, ದಾವೀದನು ಅವಳ ಸಂಗಡ ಮಲಗಿದನು.


ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.


ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಈಗ ನೀನು ನನ್ನನ್ನು ತಿರಸ್ಕರಿಸಿ, ಹಿತ್ತಿಯನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡದ್ದರಿಂದ, ಖಡ್ಗವು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ತೊಲಗದು.


ಆದರೆ ಸಮುಯೇಲನು ಸೌಲನಿಗೆ, “ನಾನು ನಿನ್ನ ಸಂಗಡ ಹಿಂದಿರುಗಿ ಬರುವುದಿಲ್ಲ. ಏಕೆಂದರೆ ನೀನು ಯೆಹೋವ ದೇವರ ವಾಕ್ಯವನ್ನು ತಿರಸ್ಕರಿಸಿದ್ದೀ. ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿರದ ಹಾಗೆ ತಿರಸ್ಕಾರಮಾಡಿಬಿಟ್ಟರು,” ಎಂದು ಹೇಳಿದನು.


ಶಿಮ್ಮಿಯು ಅರಸನನ್ನು ದೂಷಿಸುತ್ತಾ, “ಕೊಲೆಗಾರನೇ, ನೀಚನೇ, ಹೊರಟು ಹೋಗು; ಹೊರಟು ಹೋಗು.


ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.


ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧದಿಂದ ನನ್ನನ್ನು ಬಿಡಿಸಿರಿ, ನನ್ನ ನಾಲಿಗೆಯು ನಿಮ್ಮ ನೀತಿಯನ್ನು ಹಾಡುವುದು.


ಯಜ್ಞವನ್ನು ನೀವು ಇಷ್ಟಪಡುವುದಿಲ್ಲ, ಇಲ್ಲವಾದರೆ ನಾನು ಅದನ್ನು ತರುತ್ತಿದ್ದೆನು. ದಹನಬಲಿಗಳಲ್ಲಿ ನೀವು ಸಂತೋಷಪಡುವುದಿಲ್ಲ.


ತನ್ನ ಯಥಾರ್ಥತೆಯಲ್ಲಿ ನಡೆಯುವವನು ಯೆಹೋವ ದೇವರಿಗೆ ಭಯಪಡುತ್ತಾನೆ, ಆದರೆ ಅವರನ್ನು ತಿರಸ್ಕರಿಸುವವರು ತಮ್ಮ ಮಾರ್ಗಗಳಲ್ಲಿ ಮೋಸ ಹೋಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು