Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:37 - ಕನ್ನಡ ಸಮಕಾಲಿಕ ಅನುವಾದ

37 ಆದರೆ ಅಬ್ಷಾಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅಮ್ಮೀಹೂದನ ಮಗ ತಲ್ಮಾಯನ ಬಳಿಗೆ ಹೋದನು. ದಾವೀದನು ಬಹಳ ದಿನಗಳವರೆಗೆ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37-38 ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ದಾವೀದನು ತನ್ನ ಮಗನಿಗಾಗಿ ಪ್ರತಿನಿತ್ಯವೂ ಗೋಳಾಡುತ್ತಿದ್ದನು. ಗೆಷೂರಿನ ರಾಜನೂ ಅಮ್ಮೀಹೂದನ ಮಗನೂ ಆದ ತಲ್ಮೈನ ಹತ್ತಿರಕ್ಕೆ ಅಬ್ಷಾಲೋಮನು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:37
8 ತಿಳಿವುಗಳ ಹೋಲಿಕೆ  

ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು;


ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು.


ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು.


ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.


ಅಬ್ಷಾಲೋಮನು ಓಡಿಹೋದನು. ಆಗ ಕಾವಲುಗಾರನು ಕಣ್ಣೆತ್ತಿ ನೋಡುವಾಗ, ಅವನ ಹಿಂಭಾಗದಲ್ಲಿ ಬೆಟ್ಟದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು. ಕಾವಲುಗಾರನು ಹೋಗಿ ಅರಸನಿಗೆ, “ನಾನು ಬೆಟ್ಟದ ಬದಿಯಲ್ಲಿರುವ ಹೋರೋನೈಮ್ ದಿಕ್ಕಿನಲ್ಲಿ ಮನುಷ್ಯರನ್ನು ಕಂಡೆನು,” ಎಂದು ಹೇಳಿದನು.


ಅವನು ಮಾತನಾಡಿ ತೀರಿಸಿದಾಗ, ಅರಸನ ಪುತ್ರರು ಬಂದು ಸ್ವರವೆತ್ತಿ ಅತ್ತರು. ಅರಸನೂ, ಅವನ ಸಮಸ್ತ ಸೇವಕರೂ ಮಹಾಧ್ವನಿಯಿಂದ ಅತ್ತರು.


ಆಗ ಆ ಸ್ತ್ರೀಯು, “ಹಾಗಾದರೆ, ಏಕೆ ದೇವಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನಡೆಸುವುದೇನು? ಅರಸನು ತಾನು ಬಹಿಷ್ಕರಿಸಿದ ಮಗನನ್ನು ತಿರುಗಿ ಸೇರಿಸಿಕೊಳ್ಳದೆ ಹೋದದ್ದರಿಂದ, ತನ್ನನ್ನು ತಾನೇ ಅಪರಾಧಿ ಎಂದು ತೀರ್ಪುಮಾಡಿದ ಹಾಗಾಯಿತು.


ಏಕೆಂದರೆ, ‘ಯೆಹೋವ ದೇವರು ನನ್ನನ್ನು ಯೆರೂಸಲೇಮಿಗೆ ತಿರುಗಿ ನಿಜವಾಗಿಯೂ ಬರಮಾಡಿದರೆ, ನಾನು ಯೆಹೋವ ದೇವರನ್ನು ಸೇವಿಸುವೆನು,’ ಎಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಹರಕೆ ಮಾಡಿಕೊಂಡಿದ್ದನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು