Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:19 - ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದೆ ಅಲ್ಲವೇ?’ ಎಂದು ಕೇಳಿದನು. ಅದಕ್ಕೆ ಆ ಸ್ತ್ರೀ, “ಅರಸರ ಜೀವದಾಣೆ, ಅರಸರು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ನಿಮ್ಮ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವರು ನಿಮ್ಮ ಸೇವಕನಾದ ಯೋವಾಬನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅರಸನು - ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದಲ್ಲವೋ ಎಂದು ಕೇಳಿದನು. ಅದಕ್ಕೆ ಸ್ತ್ರೀಯು - ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವದಕ್ಕೆ ಆಗುವದಿಲ್ಲ; ನಿನ್ನ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಜನು, “ಈ ವಿಚಾರಗಳನ್ನೆಲ್ಲ ಹೇಳಲು ಯೋವಾಬನು ನಿನಗೆ ತಿಳಿಸಿದನಲ್ಲವೇ?” ಎಂದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ನಿಮ್ಮ ಆಣೆಯಾಗಿಯೂ, ನೀವು ಹೇಳಿದ್ದು ಸರಿ! ನಿಮ್ಮ ಸೇವಕನಾದ ಯೋವಾಬನು ಈ ವಿಷಯಗಳನ್ನು ಹೇಳಲು ನನಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:19
22 ತಿಳಿವುಗಳ ಹೋಲಿಕೆ  

ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು,” ಎಂದು ಹೇಳಿ ಯೋವಾಬನು ಅವಳಿಗೆ ಕಲಿಸಿಕೊಟ್ಟನು.


“ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ಇಲ್ಲಿ ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.


ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.


ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.


ಆಗ ಎಲೀಯನು ಎಲೀಷನಿಗೆ, “ನೀನು ದಯಮಾಡಿ ಇಲ್ಲಿ ಇರು. ಯೆಹೋವ ದೇವರು ನನ್ನನ್ನು ಬೇತೇಲಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕೆ ಎಲೀಷನು, “ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.


ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು.


ನಿನ್ನ ಕೈಗಳು ಕಟ್ಟಿರಲಿಲ್ಲ. ನಿನ್ನ ಕಾಲಿಗೆ ಬೇಡಿ ಹಾಕಿರಲಿಲ್ಲ. ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದು ಹೋದೆ.” ಆಗ ಜನರೆಲ್ಲರು ತಿರುಗಿ ಅವನಿಗೋಸ್ಕರ ಅತ್ತರು.


ಅದು ಯೋವಾಬನ ತಲೆಯ ಮೇಲೆಯೂ, ಅವನ ತಂದೆಯ ಮನೆತನದವರ ಮೇಲೆಯೂ ನಿಂತಿರಲಿ. ಯೋವಾಬನ ಮನೆಯಲ್ಲಿ ರಕ್ತಸ್ರಾವ ರೋಗದವರೂ, ಕುಷ್ಠರೋಗಿಯೂ, ಕೋಲು ಹಿಡಿದು ನಡೆಯುವವನೂ, ಖಡ್ಗದಿಂದ ಬೀಳುವವನೂ, ಆಹಾರದ ಕೊರತೆಯುಳ್ಳವನಾಗಿಯೂ ಇದ್ದೇ ಇರಲಿ,” ಎಂದನು.


ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.


ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.


ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.


ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟು ಹೋಗುವುದನ್ನು ಸೌಲನು ಕಂಡಾಗ, ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ, “ಅಬ್ನೇರನೇ, ಈ ಯುವಕನು ಯಾರ ಮಗನು?” ಎಂದನು. ಅದಕ್ಕೆ ಅಬ್ನೇರನು, “ಅರಸನೇ, ನಿನ್ನ ಪ್ರಾಣದಾಣೆ ನಾನರಿಯೆ,” ಎಂದನು.


“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.


ಹೀಗಿರುವುದರಿಂದ ನೀವು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಅನುಸರಿಸಿ ನಡೆಯದಂತೆ, ನಾನು ಇಂದು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.


ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.


ನಮ್ಮನ್ನು ನಿನ್ನ ದೇಶದೊಳಗಿಂದ ದಾಟಿ ಹೋಗಗೊಡಿಸು; ನಾವು ಹೊಲವನ್ನಾದರೂ, ದ್ರಾಕ್ಷಿ ತೋಟವನ್ನಾದರೂ ದಾಟಿ ಹೋಗುವುದಿಲ್ಲ; ರಾಜಮಾರ್ಗದಲ್ಲಿ ಮಾತ್ರ ಹೋಗುತ್ತೇವೆ; ನಿನ್ನ ಮೇರೆಯನ್ನು ನಾವು ದಾಟುವವರೆಗೆ ಬಲಗಡೆಗಾದರೂ, ಎಡಗಡೆಗಾದರೂ ನಾವು ತಿರುಗುವುದಿಲ್ಲ,” ಎಂದು ವಿನಂತಿಸಿದನು.


ಅವನ ಸಂಗಡ ನೀನು ಮಾತನಾಡಿ, ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಂದಲೂ ಅವನ ಬಾಯಿಂದಲೂ ನಾನೇ ಮಾತನಾಡಿ ನೀವು ಮಾಡಬೇಕಾದುದನ್ನು ಕಲಿಸುವೆನು.


ಆಗ ಅರಸನು ಉತ್ತರವಾಗಿ ಆ ಸ್ತ್ರೀಗೆ, “ನಾನು ನಿನ್ನಿಂದ ಕೇಳುವುದನ್ನು ನನಗೆ ಮರೆಮಾಡಬೇಡ,” ಎಂದನು. ಅದಕ್ಕವಳು, “ಅರಸನಾದ ನನ್ನ ಒಡೆಯನು ಮಾತನಾಡಲಿ,” ಎಂದಳು.


ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಏಕೆ ಮೋಸಮಾಡಿಕೊಳ್ಳಬೇಕು. ಏಕೆಂದರೆ ಅರಸನಿಗೆ ಯಾವ ಕಾರ್ಯವೂ ಮರೆಯಾಗಿರುವುದಿಲ್ಲ. ನೀನೇ ನನಗೆ ವಿರೋಧವಾಗಿ ನಿಲ್ಲುವಿ,” ಎಂದನು.


ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು