Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:21 - ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಅರಸನು ಯೋವಾಬನಿಗೆ, “ನಾನು ಈ ಕಾರ್ಯವನ್ನು ಮಾಡಿದೆನು. ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ತಿರುಗಿ ಕರೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ, ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರೆದುಕೊಂಡು ಬಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ; ಹೋಗಿ ಆ ಯುವಕ ಅಬ್ಷಾಲೋಮನನ್ನು ಕರೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅನಂತರ ಅರಸನು ಯೋವಾಬನಿಗೆ - ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ; ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರಕೊಂಡು ಬಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ರಾಜನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ. ಈಗ ಯುವಕನಾದ ಅಬ್ಷಾಲೋಮನನ್ನು ಹಿಂದಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:21
4 ತಿಳಿವುಗಳ ಹೋಲಿಕೆ  

ಆಕೆ, “ಹಾಗಾದರೆ ನನ್ನ ಮಗನು ಸಾಯದಂತೆ ನಾಶನಕ್ಕೆ ನಾಶನವನ್ನು ಕೂಡಿಸುವ ಸೇಡುತೀರಿಸುವವರನ್ನು ತಡೆಯಲು ಅರಸನು ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಲಿ,” ಎಂದಳು. ಅದಕ್ಕೆ ದಾವೀದನು, “ಯೆಹೋವ ದೇವರ ಜೀವದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ,” ಎಂದನು.


ಇದರಿಂದ ಅರಸನಿಗೆ ಬಹಳ ದುಃಖವಾದರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಆಕೆಯ ಕೋರಿಕೆಯನ್ನು ನಿರಾಕರಿಸಲಿಲ್ಲ.


ಏಕೆಂದರೆ ನನ್ನ ಪುತ್ರನಾದ ಯೋನಾತಾನನಿಂದಾದರೂ ಉಂಟಾಗಿದ್ದರೆ, ಅವನು ಸತ್ತೇ ಸಾಯುವನೆಂದು ಇಸ್ರಾಯೇಲರನ್ನು ರಕ್ಷಿಸುವ ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ,” ಎಂದನು. ಆದರೆ ಸಮಸ್ತ ಜನರಲ್ಲಿ ಒಬ್ಬನಾದರೂ ಅವನಿಗೆ ಉತ್ತರ ಕೊಡಲಿಲ್ಲ.


ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು