Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:22 - ಕನ್ನಡ ಸಮಕಾಲಿಕ ಅನುವಾದ

22 ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ, “ಅರಸರೇ, ನನ್ನ ಒಡೆಯರೇ, ನೀವು ನಿಮ್ಮ ಸೇವಕನಾದ ನನ್ನ ಬಿನ್ನಹವನ್ನು ಆಲಿಸಿದ್ದರಿಂದ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ - ಅರಸನೇ, ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿತು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೋವಾಬನು ಅರಸನಾದ ದಾವೀದನಿಗೆ ಸಾಷ್ಟಾಂಗನಮಸ್ಕಾರಮಾಡಿ, “ನಾನು ಕೇಳಿಕೊಂಡದ್ದನ್ನು ನೀನು ನೆರವೇರಿಸಿದ್ದರಿಂದ, ನೀನು ನನ್ನ ವಿಷಯದಲ್ಲಿ ಸಂತೋಷದಿಂದಿರುವೆ ಎಂಬುದು ಇಂದು ನನಗೆ ಗೊತ್ತಾಯಿತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:22
13 ತಿಳಿವುಗಳ ಹೋಲಿಕೆ  

ಆಕೆಯ ಮಕ್ಕಳು ಎದ್ದು, ಆಕೆಯನ್ನು ಧನ್ಯಳೆಂದು ಕರೆಯುವರು. ಆಕೆಯ ಪತಿಯು ಸಹ ಆಕೆಯನ್ನು,


ಆ ಬಡವರು ನನ್ನ ಕುರಿ ಉಣ್ಣೆಯಿಂದ ಬೆಚ್ಚಗಾಗಿ, ತಮ್ಮ ಅಂತರಾಳದಿಂದ ನನ್ನನ್ನು ಹರಸಲಿಲ್ಲವೋ?


ಕೇಳಿದ ಕಿವಿಯು ನನ್ನನ್ನು ಹರಸುತ್ತಿತ್ತು; ನೋಡಿದವರು ನನ್ನನ್ನು ಗೌರವಿಸುತ್ತಿದ್ದರು.


ಆಗ ಜನರು ಯೆರೂಸಲೇಮಿನಲ್ಲಿ ವಾಸವಾಗಿರಲು, ಸಮ್ಮತಿಪಟ್ಟವರೆಲ್ಲರನ್ನು ಆಶೀರ್ವದಿಸಿದರು.


ಜನರೆಲ್ಲರೂ ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ, ಬರ್ಜಿಲ್ಲೈಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಸ್ಥಳಕ್ಕೆ ಹಿಂದಿರುಗಿದನು.


ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.


ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಕ್ಕೆ ಹೋಗಿ ಯಾರ ದಯೆಯು ನನಗೆ ಆಗುವುದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿ ಕೊಳ್ಳುವೆನು,” ಎಂದಳು. ನೊವೊಮಿ, “ಹೋಗಿ ಬಾ, ಮಗಳೇ,” ಎಂದಳು.


ಆದರೆ ನೋಹನಿಗೆ ಯೆಹೋವ ದೇವರ ದಯೆ ದೊರಕಿತು.


ಯೋಸೇಫನು ತನ್ನ ತಂದೆ ಯಾಕೋಬನನ್ನು ಕರೆದುಕೊಂಡು ಬಂದು, ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ಆದ್ದರಿಂದ ಅರಸನು ಯೋವಾಬನಿಗೆ, “ನಾನು ಈ ಕಾರ್ಯವನ್ನು ಮಾಡಿದೆನು. ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ತಿರುಗಿ ಕರೆದುಕೊಂಡು ಬಾ,” ಎಂದನು.


ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.


ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು