Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:9 - ಕನ್ನಡ ಸಮಕಾಲಿಕ ಅನುವಾದ

9 ಆದರೆ ತೆಕೋವದ ಸ್ತ್ರೀಯು ಅರಸನಿಗೆ, “ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ, ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಅರಸನೂ, ಅವನ ಸಿಂಹಾಸನವೂ ನಿರಪರಾಧವಾಗಿರಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ತೆಕೋವದ ಸ್ತ್ರೀಯು, “ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಆ ತೆಕೋವದ ಸ್ತ್ರೀ, “ಅರಸರೇ, ಒಡೆಯರೇ, ಅಪರಾಧ ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸರಿಗೂ ಅವರ ಸಿಂಹಾಸನಕ್ಕೂ ದೋಷಹತ್ತದಿರಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ತೆಕೋವದ ಸ್ತ್ರೀಯು - ಅರಸನೇ, ಒಡೆಯನೇ, ಅಪರಾಧವು ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸನಿಗೂ ಅವನ ಸಿಂಹಾಸನಕ್ಕೂ ದೋಷಹತ್ತದಿರಲಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತೆಕೋವದ ಆ ಸ್ತ್ರೀಯು ರಾಜನಿಗೆ, “ರಾಜನಾದ ನನ್ನ ಒಡೆಯನೇ, ದೋಷವೆಲ್ಲವೂ ನನ್ನ ಮೇಲೆಯೇ ಬರಲಿ. ನನ್ನ ಒಡೆಯನಾದ ರಾಜನೇ, ನೀನೂ ನಿನ್ನ ರಾಜ್ಯವೂ ನಿರ್ದೋಷಿಗಳಾಗಿದ್ದೀರಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:9
10 ತಿಳಿವುಗಳ ಹೋಲಿಕೆ  

ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ನನ್ನ ಒಡೆಯನೇ, ಈ ಅಕ್ರಮವು ನನ್ನ ಮೇಲಿರಲಿ; ದಯಮಾಡಿ ನಿನ್ನ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನಿನ್ನ ದಾಸಿಯ ಮಾತುಗಳನ್ನು ಕೇಳು.


ಆದ್ದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆಯೂ, ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವುದು. ಆದರೆ ದಾವೀದನ ಮೇಲೆಯೂ, ಅವನ ಸಂತಾನದವರ ಮೇಲೆಯೂ, ಅವನ ಮನೆಯ ಮೇಲೆಯೂ, ಅವನ ಸಿಂಹಾಸನದ ಮೇಲೆಯೂ ಯೆಹೋವ ದೇವರಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವುದು,” ಎಂದನು.


ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.


“ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಅವನ ತಾಯಿಯು ಅವನಿಗೆ, “ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ, ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ, ಅವುಗಳನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದಳು.


ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ, ಎಂದೆಂದಿಗೂ ನಾನು ಅಪರಾಧವನ್ನು ಹೊರುವೆನು.


ಆಗ ಅರಸನು ಆ ಸ್ತ್ರೀಗೆ, “ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ,” ಎಂದನು.


ಅದಕ್ಕೆ ಅರಸನು, “ಯಾವನಾದರೂ ನಿನಗೆ ಏನಾದರೂ ಹೇಳಿದರೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದೆ ಇರುವನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು