Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:20 - ಕನ್ನಡ ಸಮಕಾಲಿಕ ಅನುವಾದ

20 ನೀನು ನಿನ್ನೆ ಬಂದವನು. ನಾನು ಎಲ್ಲಿಗೆ ಹೋಗುತ್ತೇನೋ ನನಗೇ ಗೊತ್ತಿಲ್ಲ. ಆದುದರಿಂದ ನಾನು ನಿನ್ನನ್ನು ನಮ್ಮ ಸಂಗಡ ಸುಮ್ಮನೇ ತಿರುಗಾಡಿಸುವುದು ಏಕೆ? ನೀನು ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಕ್ಕೆ ಹೋಗು. ದಯೆಯೂ, ನಂಬಿಗಸ್ತಿಕೆಯೂ ನಿನ್ನ ಸಂಗಡ ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವದು; ಹೀಗಿರುವದರಿಂದ ನಿನ್ನೆ ಬಂದಂಥ ನಿನ್ನನ್ನು ಕರಕೊಂಡು ಹೋಗಿ ಸುಮ್ಮನೆ ಯಾಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರರನ್ನು ಕರಕೊಂಡು ಹಿಂದಿರುಗಿಹೋಗು; ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀನು ನನ್ನ ಜೊತೆ ಸೇರಿಕೊಳ್ಳಲು ಬಂದದ್ದು ನಿನ್ನೆಯಷ್ಟೇ. ನೀನು ಈಗ ನನ್ನೊಂದಿಗೆ ಬೇರೆಬೇರೆ ಸ್ಥಳಗಳಲ್ಲಿ ಅಲೆಯಬೇಕೇ? ಇಲ್ಲ! ನಿನ್ನ ಸೋದರರನ್ನೂ ನಿನ್ನ ಜೊತೆಯಲ್ಲಿ ಕರೆದುಕೊಂಡು ಹಿಂತಿರುಗಿಹೋಗು. ದಯೆಯೂ ನಂಬಿಗಸ್ತಿಕೆಯೂ ನಿನ್ನಲ್ಲಿ ತೋರಿಬರಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:20
17 ತಿಳಿವುಗಳ ಹೋಲಿಕೆ  

ಆದ್ದರಿಂದ ದಾವೀದನೂ, ಹೆಚ್ಚು ಕಡಿಮೆ ಆರುನೂರು ಮಂದಿಯಿದ್ದ ತನ್ನ ಜನರೂ ಎದ್ದು ಕೆಯೀಲಾವನ್ನು ಬಿಟ್ಟು ವಿವಿಧ ಕಡೆಗಳಲ್ಲಿ ಅಲೆದಾಡಿದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.


ಈಗ ಯೆಹೋವ ದೇವರು ನಿಮಗೆ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ, ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ಆಗ ಅವರು ಸಮುದ್ರದಿಂದ ಸಮುದ್ರಕ್ಕೂ, ಉತ್ತರದಿಂದ ಪೂರ್ವಕ್ಕೂ ಅಲೆದು ಯೆಹೋವ ದೇವರ ವಾಕ್ಯವನ್ನು ಹುಡುಕುವುದಕ್ಕೆ ಅತ್ತಿತ್ತ ಓಡಾಡಿ, ಅದನ್ನು ಕಾಣದೆ ಹೋಗುವರು.


ಕೆಟ್ಟದ್ದನ್ನು ಕಲ್ಪಿಸುವವರು ದಾರಿ ತಪ್ಪುವುದಿಲ್ಲವೇ? ಆದರೆ ಒಳ್ಳೆಯದನ್ನು ಕಲ್ಪಿಸುವವರಿಗೆ ಪ್ರೀತಿ ಸತ್ಯತೆಯು ಇರುವುವು.


ನೀತಿಯೂ, ನ್ಯಾಯವೂ ನಿಮ್ಮ ಸಿಂಹಾಸನದ ಅಸ್ತಿವಾರವಾಗಿವೆ. ಪ್ರೀತಿಯೂ, ಸತ್ಯತೆಯೂ ನಿಮ್ಮ ಮುಂದೆ ಹೋಗುತ್ತವೆ.


ಪ್ರೀತಿಯೂ ಸತ್ಯತೆಯೂ ಸಂಧಿಸಿಕೊಳ್ಳುತ್ತವೆ. ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುತ್ತವೆ.


ಆತನು ಎಂದೆಂದಿಗೂ ದೇವರ ಮುಂದೆ ಆಳಿಕೆಮಾಡಲಿ. ಆತನನ್ನು ಕಾಯುವ ಹಾಗೆ ನಿಮ್ಮ ಪ್ರೀತಿ, ಸತ್ಯವನ್ನು ನೇಮಿಸಿರಿ.


ಅವರು ಆಹಾರಕ್ಕಾಗಿ ಅಲೆದಾಡುವರು. ತೃಪ್ತಿಯಾಗದಿದ್ದರೆ ಗೊಣಗುಟ್ಟುವರು.


ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.


ನನ್ನ ಗೋಳಾಟವನ್ನು ಎಣಿಕೆ ಮಾಡಿರಿ, ನಿಮ್ಮ ಸುರುಳಿಯಲ್ಲಿ ನನ್ನ ಕಣ್ಣೀರ ಲೆಕ್ಕಮಾಡಿರಿ, ಅವು ನಿಮ್ಮ ಗ್ರಂಥದಲ್ಲಿ ಬರೆದಿದೆಯಲ್ಲವೇ?


ಯೆಹೋವ ದೇವರ ಒಡಂಬಡಿಕೆಯನ್ನು ಕೈಗೊಳ್ಳುವವರಿಗೆ ಅವರ ದಾರಿಯೆಲ್ಲವು ಪ್ರೀತಿ, ಸತ್ಯದಿಂದ ತುಂಬಿರುತ್ತವೆ.


ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.


ದಾವೀದನು ಯಾಬೇಷ್ ಗಿಲ್ಯಾದಿನವರಿಗೆ ದೂತರನ್ನು ಕಳುಹಿಸಿ, “ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ, ಅವನನ್ನು ಸಮಾಧಿಮಾಡಿದ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ.


ಆಗ ನಾನು ನನ್ನ ಹರಕೆಗಳನ್ನು ದಿನದಿನವೂ ಸಲ್ಲಿಸುವೆನು. ನಿಮ್ಮ ಹೆಸರನ್ನು ನಾನು ಎಂದೆಂದಿಗೂ ಕೀರ್ತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು