Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಅಬ್ಷಾಲೋಮನು ಅವನಿಗೆ, “ನೋಡು ನಿನ್ನ ಕಾರ್ಯವು ಒಳ್ಳೆಯದೂ, ನ್ಯಾಯವಾದದದ್ದೂ ಆಗಿದೆ. ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವುದಕ್ಕೆ ಯಾವನೂ ಇಲ್ಲ,” ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಅಬ್ಷಾಲೋಮನು‍, “ನೋಡಿ, ನಿಮ್ಮ ವ್ಯಾಜ್ಯ ಒಳ್ಳೆಯದು ಹಾಗು ನ್ಯಾಯವಾದದ್ದು. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ರಾಜಪ್ರತಿನಿಧಿ ಒಬ್ಬನೂ ನೇಮಕವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಅಬ್ಷಾಲೋಮನು - ನೋಡು, ನಿನ್ನ ಕಾರ್ಯವು ಒಳ್ಳೇದೂ ನ್ಯಾಯವಾದದ್ದೂ ಆಗಿದೆ; ಆದರೆ ವ್ಯಾಜ್ಯಗಳನ್ನು ವಿಚಾರಿಸುವದಕ್ಕೆ ಅರಸನಿಂದ ಒಬ್ಬನೂ ನೇಮಕವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಅಬ್ಷಾಲೋಮನು ಆ ಮನುಷ್ಯನಿಗೆ, “ನೋಡು, ನಿನ್ನ ಬೇಡಿಕೆಗಳು ಸರಿಯಾಗಿವೆ. ಆದರೆ ರಾಜನಾದ ದಾವೀದನು ನಿನ್ನ ಮಾತುಗಳನ್ನು ಕೇಳುವುದಿಲ್ಲ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:3
16 ತಿಳಿವುಗಳ ಹೋಲಿಕೆ  

ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.


ಎಲ್ಲರನ್ನು ಸನ್ಮಾನಿಸಿರಿ, ವಿಶ್ವಾಸಿಗಳ ಸಹೋದರತ್ವವನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ, ಅರಸನನ್ನು ಸನ್ಮಾನಿಸಿರಿ.


“ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ಏಕೆಂದರೆ, ‘ನಿನ್ನ ಜನರ ಅಧಿಪತಿಯ ಕುರಿತಾಗಿ ಕೆಟ್ಟದ್ದನ್ನು ಮಾತನಾಡಬಾರದು’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದು ಪೌಲನು ಹೇಳಿದನು.


‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ದೇವರು ಹೇಳಿದ್ದಾರೆ.


ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು. ಅವನಿಗೆ ರಾಜಮರ್ಯಾದೆಯನ್ನು ಕೊಡುವುದಿಲ್ಲ. ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.


“ತನ್ನ ತಂದೆಯನ್ನು ಹಾಸ್ಯಮಾಡಿ, ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. ರಣಹದ್ದುಗಳು ಅದನ್ನು ತಿಂದುಬಿಡುವವು.


“ತಮ್ಮ ತಂದೆಯನ್ನು ಶಪಿಸಿ, ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವವರು ಇದ್ದಾರೆ.


ಒಳ್ಳೆಯವನು ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ, ಆದರೆ ಕುಯುಕ್ತಿ ಮಾಡುವವನನ್ನು ಅವರು ದುಷ್ಟನೆಂದು ಖಂಡಿಸುತ್ತಾರೆ.


ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.


ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು.


“ತಂದೆಗಾದರೂ ತಾಯಿಗಾದರೂ ಶಾಪಕೊಟ್ಟವನು ಖಂಡಿತವಾಗಿ ಸಾಯಬೇಕು.


ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.


ಇದಲ್ಲದೆ ಅಬ್ಷಾಲೋಮನು, “ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ನೇಮಕವಾಗಿದ್ದರೆ ಎಷ್ಟೋ ಒಳ್ಳೆಯದು. ಆಗ ವ್ಯಾಜ್ಯವಾದರೂ, ನ್ಯಾಯವಿಚಾರಣೆಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ, ನಾನು ಅವನಿಗೆ ನೀತಿಯಿಂದ ನ್ಯಾಯತೀರಿಸುವೆನು,” ಅನ್ನುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು