Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:8 - ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ, ‘ಯೆಹೋವ ದೇವರು ನನ್ನನ್ನು ಯೆರೂಸಲೇಮಿಗೆ ತಿರುಗಿ ನಿಜವಾಗಿಯೂ ಬರಮಾಡಿದರೆ, ನಾನು ಯೆಹೋವ ದೇವರನ್ನು ಸೇವಿಸುವೆನು,’ ಎಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಹರಕೆ ಮಾಡಿಕೊಂಡಿದ್ದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮ ಸೇವಕನಾದ ನಾನು ಸಿರಿಯಾದೇಶದ ಗೆಷೂರಿನಲ್ಲಿದ್ದಾಗ ಸರ್ವೇಶ್ವರ ನನ್ನನ್ನು ಮರಳಿ ಜೆರುಸಲೇಮಿಗೆ ಬರಮಾಡುವುದಾದರೆ ಅವರಿಗೆ ಒಂದು ವಿಶೇಷ ಆರಾಧನೆ ಮಾಡಿಸುವೆನೆಂದು ಹರಕೆ ಮಾಡಿದ್ದೆನು,” ಎಂದು ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಸೇವಕನಾದ ನಾನು ಅರಾಮ್‍ದೇಶದ ಗೆಷೂರಿನಲ್ಲಿದ್ದಾಗ - ಯೆಹೋವನು ನನ್ನನ್ನು ತಿರಿಗಿ ಯೆರೂಸಲೇವಿುಗೆ ಬರಮಾಡುವದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೆನು ಎಂದು ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಅರಾಮಿನ ಗೆಷೂರಿನಲ್ಲಿ ನೆಲೆಸಿದ್ದಾಗ, ‘ಯೆಹೋವನು ನನ್ನನ್ನು ಜೆರುಸಲೇಮಿಗೆ ಮತ್ತೆ ಕರೆಸಿಕೊಂಡರೆ, ನಾನು ಯೆಹೋವನ ಆರಾಧನೆ ಮಾಡುತ್ತೇನೆ, ಎಂಬ ವಿಶೇಷ ಪ್ರಮಾಣವನ್ನು ಮಾಡಿದ್ದೆನು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:8
14 ತಿಳಿವುಗಳ ಹೋಲಿಕೆ  

ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.


ನೀವೇ ನನ್ನ ಬಳಿಗೆ ಬಂದು ನಮ್ಮ ದೇವರಾದ ಯೆಹೋವ ದೇವರನ್ನು ನಮಗಾಗಿ ಪ್ರಾರ್ಥಿಸು, ‘ನಮ್ಮ ದೇವರಾದ ಯೆಹೋವ ದೇವರು ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು,’ ಎಂದು ಹೇಳಿ ಮಾರಣಾಂತಿಕ ತಪ್ಪನ್ನು ಮಾಡಿದ್ದೀರಿ.


“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


ದೇವರಿಗೆ ನೀನು ಹರಕೆಯನ್ನು ಮಾಡಿದರೆ, ಅದನ್ನು ತೀರಿಸಲು ತಡಮಾಡಬೇಡ. ದೇವರು ಮೂಢರನ್ನು ಮೆಚ್ಚುವುದಿಲ್ಲ. ನೀನು ಹರಕೆ ಮಾಡಿದ್ದನ್ನು ತೀರಿಸು.


ನನ್ನ ದೇವರೇ ನಾನು ನಿಮಗೆ ಸಲ್ಲಿಸಿದ ಹರಕೆಗಳಿಗೆ ಅಧೀನವಾಗಿದ್ದೇನೆ. ನಾನು ಉಪಕಾರ ಸ್ತುತಿಯ ಕಾಣಿಕೆಗಳನ್ನು ನಿಮಗೆ ಸಲ್ಲಿಸುವೆನು.


ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು.


ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.


ಆಗ ಸಮುಯೇಲನು, “ನಾನು ಹೋಗುವುದು ಹೇಗೆ? ಸೌಲನು ಅದನ್ನು ಕೇಳಿದರೆ, ನನ್ನನ್ನು ಕೊಂದುಹಾಕುವನು,” ಎಂದನು. ಅದಕ್ಕೆ ಯೆಹೋವ ದೇವರು, “ನೀನು ಒಂದು ಕಡಸನ್ನು ನಿನ್ನ ಸಂಗಡ ತೆಗೆದುಕೊಂಡುಹೋಗಿ, ‘ನಾನು ಯೆಹೋವ ದೇವರಿಗಾಗಿ ಯಜ್ಞಮಾಡುವುದಕ್ಕೆ ಬಂದೆನು,’ ಎಂದು ಹೇಳಿ,


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು;


ಅರಸನು ಅವನಿಗೆ, “ಸಮಾಧಾನವಾಗಿ ಹೋಗು,” ಎಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು