Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:11 - ಕನ್ನಡ ಸಮಕಾಲಿಕ ಅನುವಾದ

11 ದಾವೀದನು ಅಬೀಷೈಯನಿಗೂ, ತನ್ನ ಸಮಸ್ತ ಸೇವಕರಿಗೂ, “ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ, ಎಷ್ಟೋ ಅಧಿಕವಾಗಿ ಬೆನ್ಯಾಮೀನನಾದವನು ಈಗ ಏನು ಮಾಡಿಯಾನು? ಅವನನ್ನು ಬಿಟ್ಟುಬಿಡಿರಿ. ಅವನು ದೂಷಿಸಲಿ. ಏಕೆಂದರೆ ಯೆಹೋವ ದೇವರು ಅವನಿಗೆ ಹಾಗೆಯೇ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ - ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವದು ಯಾವ ದೊಡ್ಡ ಮಾತು! ಬಿಡಿರಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:11
14 ತಿಳಿವುಗಳ ಹೋಲಿಕೆ  

“ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.


ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ, ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.


“ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.


ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.


ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.


ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.


ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟುಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾರೆ.


ಆಗ ಯೆಹೋವ ದೇವರ ವಾಕ್ಯವು, “ಈ ಮನುಷ್ಯನು ನಿನ್ನ ಉತ್ತರಾಧಿಕಾರಿಯಾಗುವುದಿಲ್ಲ. ನಿನ್ನಿಂದಲೇ ಹುಟ್ಟಿಬರುವ ನಿನ್ನ ಮಗನು ನಿನ್ನ ವಾರಸುದಾರನಾಗುವನು,” ಎಂದು ಹೇಳಿ,


ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.


ಅವರು ಶಪಿಸಲಿ, ಆದರೆ ನೀವು ಆಶೀರ್ವದಿಸಿರಿ. ನನಗೆ ಹಾನಿಮಾಡುವವರು ನಾಚಿಕೆಪಡಲಿ; ಆದರೆ ನಿಮ್ಮ ಸೇವಕನಾದ ನಾನು ಸಂತೋಷಿಸಲಿ.


ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು