Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:2 - ಕನ್ನಡ ಸಮಕಾಲಿಕ ಅನುವಾದ

2 ಅರಸನು ಚೀಬನಿಗೆ, “ಇವು ಏಕೆ,” ಎಂದನು. ಅದಕ್ಕೆ ಚೀಬನು, “ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವುದಕ್ಕೆ, ಆ ರೊಟ್ಟಿಗಳೂ, ಬೇಸಿಗೆ ಕಾಲದ ಫಲಗಳೂ ಜನರಿಗೆ ತಿನ್ನುವುದಕ್ಕೆ, ದ್ರಾಕ್ಷಾರಸವು ಮರುಭೂಮಿಯಲ್ಲಿ ದಣಿದವರು ಕುಡಿಯುವುದಕ್ಕೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸನು ಚೀಬನನ್ನು ನೋಡಿ, “ಇವುಗಳನ್ನು ಏಕೆ ತಂದೆ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಅರಸರ ಮನೆಯವರು ಸವಾರಿಮಾಡಲೆಂದು, ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನಲೆಂದೂ ಹಾಗು ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯಲೆಂದು ತಂದಿದ್ದೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಸನು ಚೀಬನನ್ನು - ಇವುಗಳನ್ನು ಯಾಕೆ ತಂದಿ ಎಂದು ಕೇಳಲು ಅವನು - ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವದಕ್ಕಾಗಿಯೂ ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನುವದಕ್ಕಾಗಿಯೂ ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕಾಗಿಯೂ ತಂದಿದ್ದೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಾಜನಾದ ದಾವೀದನು ಚೀಬನಿಗೆ, “ಈ ವಸ್ತುಗಳೆಲ್ಲ ಏತಕ್ಕಾಗಿ?” ಎಂದು ಕೇಳಿದನು. ಚೀಬನು, “ಹೇಸರಕತ್ತೆಗಳನ್ನು ರಾಜನ ಕುಟುಂಬದವರು ಸವಾರಿ ಮಾಡುವುದಕ್ಕಾಗಿಯೂ ರೊಟ್ಟಿಗಳನ್ನು ಮತ್ತು ಹಣ್ಣುಗಳನ್ನು ಸೇವಕರು ತಿನ್ನುವುದಕ್ಕಾಗಿಯೂ ತಂದಿದ್ದೇನೆ. ಅರಣ್ಯದಲ್ಲಿ ಶಕ್ತಿಗುಂದಿಹೋದವನು ದ್ರಾಕ್ಷಾರಸವನ್ನು ಕುಡಿಯಲಿ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:2
13 ತಿಳಿವುಗಳ ಹೋಲಿಕೆ  

ಹುರಿದ ಕಡಲೆ, ಜೇನುತುಪ್ಪ, ಬೆಣ್ಣೆ, ಕುರಿ, ಹಸುವಿನ ಗಿಣ್ಣು ಇವುಗಳನ್ನು ದಾವೀದನಿಗೂ, ಅವನ ಸಂಗಡ ಇದ್ದ ಜನರಿಗೂ ತಿನ್ನುವುದಕ್ಕೆ ತಂದರು. ಏಕೆಂದರೆ, “ಮರುಭೂಮಿಯಲ್ಲಿ ಜನರು ಹಸಿದು ದಣಿದು ದಾಹಗೊಂಡಿರುವರು,” ಎಂದುಕೊಂಡರು.


ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.


“ಬಿಳಿ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾರ್ಗದಲ್ಲಿ ನಡೆಯುವವರೇ, ಗಾನಮಾಡಿರಿ.


“ ‘ಇದರ ಅರ್ಥವೇನೆಂದು ನೀನು ನಮಗೆ ಹೇಳುವುದಿಲ್ಲವೋ?’ ಎಂದು ನಿನ್ನ ದೇಶದ ಜನರು ನಿನ್ನನ್ನು ಪ್ರಶ್ನಿಸುವಾಗ,


ಅದಕ್ಕವನು, “ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಏಕೆಂದರೆ ನಿನ್ನ ಸೇವಕನು ಕುಂಟನಾಗಿರುವುದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕಿ, ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.


ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು.


ಇದರ ತರುವಾಯ ಅಬ್ಷಾಲೋಮನು ತನಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.


ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತೆಗೆದುಕೊಂಡು ಬಂದ ಈ ಕಾಣಿಕೆಯು ನನ್ನ ಒಡೆಯನ ಹೆಜ್ಜೆಯಲ್ಲಿ ನಡೆಯುವವರಿಗೆ ಸಲ್ಲಲಿ.


ಆಗ ಜನರಲ್ಲಿ ಒಬ್ಬನು ಅವನಿಗೆ, “ ‘ಈ ಹೊತ್ತು ಆಹಾರ ತಿನ್ನುವವರು ಶಾಪಗ್ರಸ್ತರಾಗಲಿ,’ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ,” ಎಂದನು.


ಆಗ ಏಸಾವನು, “ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆಗಳೆಲ್ಲಾ ಏತಕ್ಕೆ?” ಎಂದು ಕೇಳಿದನು. ಯಾಕೋಬನು, “ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕುವುದಕ್ಕೋಸ್ಕರ,” ಎಂದನು.


ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಆ ಏಳು ಹೆಣ್ಣು ಕುರಿಮರಿಗಳನ್ನು ಬೇರೆಯಾಗಿ ನಿಲ್ಲಿಸಿದ ಅರ್ಥ ಏನು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು