Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಅರಸನು ಅವನನ್ನು, “ನಿನ್ನ ಯಜಮಾನನ ಪುತ್ರನು ಎಲ್ಲಿದ್ದಾನೆ?” ಎಂದು ಕೇಳಿದನು. ಚೀಬನು ಅರಸನಿಗೆ, “ಅವನು ಯೆರೂಸಲೇಮಿನಲ್ಲಿದ್ದಾನೆ. ಏಕೆಂದರೆ ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರುಗಿ ಕೊಡುವರೆಂದು ಹೇಳಿಕೊಂಡನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನು ತಿರುಗಿ ಅವನನ್ನು, “ನಿನ್ನ ಯಜಮಾನನ ಮಗನು ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲರು ಮರಳಿ ತನಗೇ ಕೊಡುವರೆಂದು ಹೇಳಿ ಅವನು ಯೆರೂಸಲೇಮಿನಲ್ಲೇ ಉಳಿದನು” ಅಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅರಸನು ಮತ್ತೆ, “ನಿನ್ನ ಯಜಮಾನನ ಮಗ ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಯೇಲರು ಈ ದಿನ ತನಗೆ ಮರಳಿಕೊಡುವರೆಂದು ಹೇಳಿ ಅವನು ಜೆರುಸಲೇಮಿನಲ್ಲೇ ಉಳಿದುಕೊಂಡನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅರಸನು ತಿರಿಗಿ ಅವನನ್ನು - ನಿನ್ನ ಯಜಮಾನನ ಮಗನು ಎಲ್ಲಿದ್ದಾನೆಂದು ಕೇಳಲು ಅವನು - ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲ್ಯರು ಈಹೊತ್ತು ತನಗೆ ತಿರಿಗಿ ಕೊಡುವರೆಂದು ಹೇಳಿ ಅವನು ಯೆರೂಸಲೇವಿುನಲ್ಲೇ ಉಳುಕೊಂಡನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಾಜನು, “ಮೆಫೀಬೋಶೆತನು ಎಲ್ಲಿ?” ಎಂದು ಕೇಳಿದನು. ಚೀಬನು ರಾಜನಿಗೆ, “ಮೆಫೀಬೋಶೆತನು ಜೆರುಸಲೇಮಿನಲ್ಲಿಯೇ ಇದ್ದಾನೆ. ಯಾಕೆಂದರೆ ‘ಇಸ್ರೇಲರು ನನ್ನ ತಾತನ ರಾಜ್ಯಾಧಿಕಾರವನ್ನು ಈ ದಿನ ನನಗೆ ಹಿಂದಕ್ಕೆ ಕೊಡುತ್ತಾರೆ’ ಎಂಬುದು ಅವನ ಆಲೋಚನೆಯಾಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:3
13 ತಿಳಿವುಗಳ ಹೋಲಿಕೆ  

ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ನೆರೆಯವನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸೆ ಇಡಬೇಡಿರಿ; ನಿನ್ನ ಎದೆಯಲ್ಲಿ ಮಲಗುವವಳಿಗೆ ನಿನ್ನ ಬಾಯಿಯ ಬಾಗಿಲುಗಳನ್ನು ಕಾಯಿ.


ಸುಳ್ಳುಸಾಕ್ಷಿಯವನು ನಾಶವಾಗುವನು; ಆದರೆ ಕೇಳಿದ್ದನ್ನೇ ನುಡಿಯುವವನ ಸಾಕ್ಷಿ ಸದಾ ನಿಲ್ಲುವುದು.


ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ. ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.


ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು.


ನನ್ನ ಆಪ್ತಮಿತ್ರರನ್ನು ದೂರ ಮಾಡಿದಿರಿ. ಅಂಧಕಾರವೇ ನನ್ನ ಪರಿಚಯವು.


ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ, ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ, ಇತರರನ್ನು ನಿಂದಿಸುವುದೂ ಇಲ್ಲ;


ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.


ಆಗ ಅರಸನು ಚೀಬನಿಗೆ, “ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲವೂ ನಿನಗುಂಟಾಯಿತು,” ಎಂದನು. ಅದಕ್ಕೆ ಚೀಬನು, “ಅರಸನಾದ ನನ್ನ ಒಡೆಯನೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು