Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:23
15 ತಿಳಿವುಗಳ ಹೋಲಿಕೆ  

ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.


ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.


ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.


ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಪಟ್ಟಣವು ವಶವಾದದ್ದನ್ನು ಕಂಡಾಗ, ಜಿಮ್ರಿಯು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ, ತನ್ನ ಅರಮನೆಯನ್ನು ಬೆಂಕಿಯಿಂದ ಸುಟ್ಟು ತಾನೂ ಸತ್ತನು.


ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.


ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.


ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ದುಷ್ಟರಿಗೆ ವಿಪತ್ತು ಇಲ್ಲವೋ? ಕೆಡುಕರಿಗೆ ವಿನಾಶ ಇಲ್ಲವೋ?


ಆ ದಿವಸಗಳಲ್ಲಿ ಅಹೀತೋಫೆಲನು ತಿಳಿಸಿದ ಆಲೋಚನೆಯು ದೇವರನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಗಳನ್ನು ದಾವೀದನೂ, ಅಬ್ಷಾಲೋಮನೂ ಹಾಗೆಯೇ ಗೌರವಿಸುತ್ತಿದ್ದರು.


ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾದಾಗ ದಾಟಬೇಕಾದವರು ಒಬ್ಬರಾದರೂ ಉಳಿದಿರಲಿಲ್ಲ.


ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.


ಇದು ನನಗೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಯೆಹೋವ ದೇವರಿಂದ ಪ್ರತಿಫಲವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು