Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:29 - ಕನ್ನಡ ಸಮಕಾಲಿಕ ಅನುವಾದ

29 ಹುರಿದ ಕಡಲೆ, ಜೇನುತುಪ್ಪ, ಬೆಣ್ಣೆ, ಕುರಿ, ಹಸುವಿನ ಗಿಣ್ಣು ಇವುಗಳನ್ನು ದಾವೀದನಿಗೂ, ಅವನ ಸಂಗಡ ಇದ್ದ ಜನರಿಗೂ ತಿನ್ನುವುದಕ್ಕೆ ತಂದರು. ಏಕೆಂದರೆ, “ಮರುಭೂಮಿಯಲ್ಲಿ ಜನರು ಹಸಿದು ದಣಿದು ದಾಹಗೊಂಡಿರುವರು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವರೆ, ಅಲಸಂದೆ, ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿಗಿಣ್ಣು, ಹಸುವಿನ ಗಿಣ್ಣು, ಇವುಗಳನ್ನೂ ತಂದುಕೊಟ್ಟರು. ‘ಜನರು ಮರಳುಗಾಡಿನ ಪ್ರಯಾಣದಿಂದ ಹಸಿದಿದ್ದಾರೆ, ದಣಿದಿದ್ದಾರೆ ಹಾಗು ಬಾಯಾರಿದ್ದಾರೆ’ ಎಂಬ ಭಾವನೆಯಿಂದ ಇವುಗಳನ್ನು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಬೆಣ್ಣೆ ಕುರಿ ಹಸುವಿನ ಗಿಣ್ಣು ಇವುಗಳನ್ನೂ ತಂದು ಕೊಟ್ಟರು. ಜನರು ಅರಣ್ಯಪ್ರಯಾಣದಿಂದ ಹಸಿದವರೂ ದಣಿದವರೂ ಬಾಯಾರಿದವರೂ ಆಗಿದ್ದಾರೆ ಅಂದುಕೊಂಡು ಇವುಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:29
15 ತಿಳಿವುಗಳ ಹೋಲಿಕೆ  

ಅರಸನು ಚೀಬನಿಗೆ, “ಇವು ಏಕೆ,” ಎಂದನು. ಅದಕ್ಕೆ ಚೀಬನು, “ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವುದಕ್ಕೆ, ಆ ರೊಟ್ಟಿಗಳೂ, ಬೇಸಿಗೆ ಕಾಲದ ಫಲಗಳೂ ಜನರಿಗೆ ತಿನ್ನುವುದಕ್ಕೆ, ದ್ರಾಕ್ಷಾರಸವು ಮರುಭೂಮಿಯಲ್ಲಿ ದಣಿದವರು ಕುಡಿಯುವುದಕ್ಕೆ,” ಎಂದನು.


ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸುತ್ತಾರೆ.


ಅರಸನೂ, ಅವನ ಸಂಗಡದಲ್ಲಿರುವ ಸಮಸ್ತ ಜನರೂ ನಡೆದು ದಣಿದಿದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.


ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.


ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.


ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ಅವನು ದಣಿದು ಅವನ ಕೈ ದುರ್ಬಲವಾಗಿರುವಾಗ, ಹೋಗಿ ಅವನ ಮೇಲೆ ಬಿದ್ದು ಅವನನ್ನು ಹೆದರಿಸುವೆನು. ಆಗ ಅವನ ಸಂಗಡ ಇರುವ ಜನರೆಲ್ಲರು ಓಡಿಹೋಗುವರು.


ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಪ್ರಧಾನನಿಗೆ ಕೊಟ್ಟು, ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ, ಅವರ ಗುರುತನ್ನು ತೆಗೆದುಕೊಂಡು ಬಾ,” ಎಂದನು.


ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.


ಹಸಿದು, ದಾಹಗೊಂಡು ಅವರ ಪ್ರಾಣವು ಕುಗ್ಗಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು